23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಗೇರುಕಟ್ಟೆ ಪೇಟೆಯ ರಸ್ತೆ ಬದಿಯ ಎಲ್ಲೆಂದರಲ್ಲಿ ರಾತ್ರಿ ತ್ಯಾಜ್ಯ ತಂದು ಹಾಕುತ್ತಿದ್ದರು.

ಗ್ರಾಮಸ್ಥರಿಗೆ ಇದರಿಂದ ತುಂಬಾ ತೊಂದರೆ ಆಗುತ್ತಿದ್ದು, ಪಂಚಾಯತ್ ನ ವಾರ್ಡ್ ಸಭೆ ಗ್ರಾಮ ಸಭೆಗಳಲ್ಲಿ ಗ್ರಾಮಸ್ಥರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇತ್ತೀಚಿನ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಮ್ಮತದ ತೀರ್ಮಾನ ಕೈಗೊಂಡು ಹಾಕಿದ ತ್ಯಾಜ್ಯವನ್ನು ಸ್ವಚ್ಛಗೊಳಿಸಿ 2 ದಿನಗಳಿಗೆ ಮೊದಲು ಸಿ.ಸಿ.ಟಿ.ವಿ ಅಳವಡಿಸಿ ದಂಡ ಹಾಕುವ ಫಲಕ ಹಾಕಿದ್ದರು.

ನಿನ್ನೆ ತಡರಾತ್ರಿ ಬೇರೆ ಗ್ರಾಮದ ಹೋಟೆಲ್ ಒಂದರಿಂದ ತಾಜ್ಯ ತಂದು ಬಿಸಾಡಲು ಬಂದಾಗ ತಡರಾತ್ರಿ ಪಿ ಡಿ ಓ ಸಿಸಿಟಿವಿ ನೋಡುತ್ತಿದ್ದರು ಅದಾಗಲೇ ನಾಳಕ್ಕೆ ರಸ್ತೆಯಾಗಿ ಹೋಗುತ್ತಿದ್ದ ಪಂ ಮಾಜಿ ಅಧ್ಯಕ್ಷ ಕೇಶವ ಪೂಜಾರಿ ನೋಡಿ ತ್ಯಾಜ್ಯ ಹಾಕುತ್ತಿದ್ದವನನ್ನು ದ್ವಿಚಕ್ರ ವಾಹನ ಸಮೇತ ಹಿಡಿದಿಟ್ಟು ಸದಸ್ಯರ ಗಮನಕ್ಕೆ ತಂದರು. ತಡರಾತ್ರಿ ತಕ್ಷಣ ಪಿ ಡಿ ಓ, ಪಂಚಾಯತ್ ಸದಸ್ಯರಾದ ಲತೀಪ್ ಪರಿಮರವರು ಇನ್ನೋರ್ವ ಸದಸ್ಯರಾದ ಅಬ್ದುಲ್ ಕರೀಮ್ ಗೆ ಮಾಹಿತಿ ನೀಡಿ ಸ್ಥಳೀಯರ ಸಹಕಾರದಿಂದ ಹಾಗೂ ಮಾಜಿ ಪಂ ಅಧ್ಯಕ್ಷರು ಹಿಡಿದು ನಿಲ್ಲಿಸಿ ತಾಜ್ಯ ಬಿಸಾಡಲು ಬಂದವರಿಗೆ ಸ್ಥಳದಲ್ಲಿಯೇ ಮೂರು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.

Related posts

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya
error: Content is protected !!