32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

ಗುರುವಾಯನಕೆರೆ : ಆ. 09ರಂದು ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳು ಸೇರಿ ಪಾಂಡುರಂಗ ನಾಗರಿಕ ಸೇವಾ ಪ್ರತಿಷ್ಠಾನದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಿದರು.

ನಮ್ಮ ಮನೆ ಶಾಖೆಯ ಶಿಕ್ಷಕರಾದ ಶಿವಕುಮಾರ್ ರವರು ಅಣ್ಣ – ತಂಗಿಯರ ಬಾಂಧವ್ಯವನ್ನು ಪೌರಾಣಿಕವಾಗಿ ನಡೆದ ಘಟನೆಗಳ ಕಥೆಗಳ ಮೂಲಕ ಸ ವಿಸ್ತಾರ ವಾಗಿ ತಿಳಿಸುವುದರೊಂದಿಗೆ ರಕ್ಷಾಬಂಧನದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿ ಎಲ್ಲಾ ಅಣ್ಣ ಅಕ್ಕಂದಿರಿಗೆ ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು.


ಪಾಂಡುರಂಗ ಶಾಖೆಯ ಶಿಕ್ಷಕರಾದ ದಯಾನಂದರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಎಲ್ಲಾ ಅಣ್ಣಂದಿರು ಹಾಗೂ ಅಕ್ಕಂದಿರು ಹರ್ಷೋಲ್ಲಾಸದಿಂದ ಪರಸ್ಪರ ರಕ್ಷಾಬಂಧನವನ್ನು ಕಟ್ಟುತ್ತಾ ಸಿಹಿ ತಿಂಡಿಯನ್ನು ಹಂಚುತ್ತಾ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು.


ಎರಡು ಶಾಖೆಯಿಂದ ಸುಮಾರು 75 ಯೋಗ ಬಂಧುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya
error: Content is protected !!