23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆ.9 ರಂದು ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಅಧ್ಯಕ್ಷತೆಯಲ್ಲಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷ ಜಯಾನಂದ ಕಲ್ಲಾಪು ಮಾತನಾಡಿ ಸಂಘ ವಾರ್ಷಿಕವಾಗಿ ರೂ. 276.82 ಕೋಟಿಗಳ ವ್ಯವಹಾರವನ್ನು ಮಾಡಿ ರೂ. 1.16 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ 12% ಡಿವಿಡೆಂಡ್ ಘೋಷಿಸಲಾಗಿದೆ. ಸಾಲ ವಸೂಲಿ ಶೇ. 100 ಆಗಿವೆ ಎಂದು ತಿಳಿಸಲು ಸಂತೋಷವಾಗುತ್ತದೆ. ಅಲ್ಲದೆ ಕಳೆದ 24 ವರ್ಷಗಳಿಂದ ಸತತವಾಗಿ ಲೆಕ್ಕ ಪರಿಶೋಧನೆ ಯಲ್ಲಿ ‘ಎ’ ಗ್ರೇಡ್ ಪಡೆದಿರುವುದು ಅಲ್ಲದೆ ಸತತ 25 ವರ್ಷಗಳಿಂದ ಲಾಭದಲ್ಲಿ ನಡೆಯುತ್ತಿದೆ. ಈ ಸಾಧನೆಗೆ ಸದಸ್ಯರುಗಳ, ನಿರ್ದೇಶಕರುಗಳ ಸಹಕಾರ ಹಾಗೂ ಮಾರ್ಗದರ್ಶನ ಅಲ್ಲದೆ ನಮ್ಮ ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಕಾರಣ ಎಂದು ಹೇಳಿದರು.

ಉಪಾಧ್ಯಕ್ಷ ಸುನೀಲ್ ಅಣಾವು, ನಿರ್ದೇಶಕರಾದ ಜಗದೀಶ್ ಶೆಟ್ಟಿ ಮೈರ, ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, ಸರೋಜಿನಿ, ರಜನಿನಾಥ್, ಸುರೇಶ್, ಶ್ರೀನಿವಾಸ್ ಹಾಗೂ ಜಯವಿಕ್ರಮ್ ಕಲ್ಲಾಪು, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ:
ಡಾ.ಯು.ಪಿ.ರತ್ನಾಕರ ರಾವ್, ಅಶೋಕ್ ಕುಮಾರ್ ಮೂಂಡೂರು, ಅಜಿತ್ ಕುಮಾರ್ ಕೆ. ಎನ್., ನಾರಾಯಣ ಗೌಡ ಉರುವಾಲು, ವಿಜಯ, ಇಸುಬು, ಅವ್ವ ಬಿ., ಬೇಬಿ ಪಿ.ವರ್ಗಿಸ್, ವೀರಪ್ಪ ಗೌಡ, ಲಕ್ಷ್ಮಣ್ ನಾಯ್ಕ್ ಹಲೇಜಿ, ನೇತ್ರಾವತಿ, ಬೋಮ್ಮಯ್ಯ ಬಂಗೇರ, ಡಾ.ವೈಷ್ಣವಿ ಕೆ.ವಿ., ಅಚ್ಚುತ ಆಚಾರ್ಯ, ಮೋಹಿನಿ, ಜನಾರ್ದನ ಗೌಡ ನಾಕಾಲು, ಶಂಕರ್ ನಾರಾಯಣ್ ಭಟ್ ಮತ್ತು ಡೀಕಯ್ಯ ಗೌಡ ಸನ್ಮಾನಿಸಲಾಯಿತು. ಸಂಘದ ವ್ಯಾಪ್ತಿಯ ಉರುವಾಲು, ತಣ್ಣೀರುಪಂತ, ಕರಾಯ ಗ್ರಾಮಗಳಲ್ಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉನ್ನತ ಮಟ್ಟದಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ವಾಗತಿಸಿ, ನಿರೂಪಿಸಿದರು. ನಿರ್ದೇಶಕಿ ಜಯಂತಿ ಪಾಲೇದು ವಂದಿಸಿದರು.

Related posts

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya
error: Content is protected !!