22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

ಗೇರುಕಟ್ಟೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು,ಜ್ಞಾನ ವಿಕಾಸ,ಸ್ವಸಹಾಯ ಸಂಘ ಒಕ್ಕೂಟ ನ್ಯಾಯತರ್ಪು-ಕಳಿಯ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.8ರಂದು
ಜರುಗಿತು.


ಹಿಂದೂ ಧರ್ಮ, ಸಂಸ್ಕಾರ ಹಿಂದು ಧರ್ಮದ ಪ್ರಜ್ಞೆ,ಜಾಗ್ರತಿ ಶಿಕ್ಷಣ ಮಕ್ಕಳಿಗೆ ಬಾಲ್ಯದಲ್ಲೇ ಮೈಗೂಡಿಸುವ ಕೆಲಸ ಪೋಷಕರಿಂದ ಪ್ರತಿಯೊಂದು ಮನೆಯಲ್ಲಿ ಆಗಬೇಕು ಎಂದು ಶಿಕ್ಷಕಿ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ವಿಜಯ ಬಿ.ಶೆಟ್ಟಿ ಸಾಲೆತ್ತೂರು ಹೇಳಿದರು.


ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಪುಷ್ಪ ಉದಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಕೇಂದ್ರ ಪ್ರಗತಿ ಬಂಧು ಒಕ್ಕೂಟ ಅಧ್ಯಕ್ಷರಾದ ಸೀತಾರಾಮ ಎಂ.,
ಬೆಳ್ತಂಗಡಿ ಶ್ರೀ.ಕ್ಷೇ.ಧ.ಗ್ರಾ.ಯೋ. ಬಿ.ಸಿ.ಟ್ರಸ್ಟ್ ಯೋಜನಾಧಿಕಾರಿ ಯಶೋಧರ, ನಾಳ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ., ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಹಿರಿಯರಾದ ಜನಾರ್ದನ ಪೂಜಾರಿ ಉಪಸ್ಥಿತರಿದ್ದರು.
ವರಮಹಾಲಕ್ಷ್ಮೀ ಪೂಜಾ ಸಮಿತಿ ನಿಕಟಪೂರ್ವ ಅಧ್ಯಕ್ಷೆ ಮೀನಾಕ್ಷಿ ರಾಧಾಕೃಷ್ಣ,ಸಮಿತಿ ಉಪಾಧ್ಯಕ್ಷೆ ಅನುಪಮ ಸತೀಶ್, ಕಾರ್ಯದರ್ಶಿ ವಿನೋದ, ಜತೆ ಕಾರ್ಯದರ್ಶಿ ಸೌಮ್ಯ ವಿ.ಶೆಟ್ಟಿ., ಒಕ್ಕೂಟದ ಅಧ್ಯಕ್ಷರಾದ ಸಿದ್ದಪ್ಪ ಗೌಡ, ಶಾಲಿನಿ ಸತೀಶ್, ಸುಭಾಷಿಣಿ ಕೆ.ಜನಾರ್ದನ ಗೌಡ, ಪ್ರತಿನಿಧಿ ಸುಮಿತ್ರ ಎಸ್.ಶೆಟ್ಟಿ,ಸ್ವಸಹಾಯ ಪ್ರಗತಿ ಬಂಧು ಕಳಿಯ, ನ್ಯಾಯತರ್ಪು ಒಕ್ಕೂಟದ ಪದಾಧಿಕಾರಿಗಳು,ಸದಸ್ಯರು,ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ,ಮಹಿಳಾ ಮಂಡಳಿ ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಮತ್ತಿತರರಿದ್ದರು.

ಸನ್ಮಾನ:
ಪೂಜಾ ಸಮಿತಿ ವತಿಯಿಂದ ಅನ್ನದಾನ ಸೇವಾಕರ್ತರಾದ ಆನಂದ ಗೌಡ ದಂಪತಿ ನೆರಿಯ, ಹೇಮಂತ್ ಕುಮಾರ್ ಮೈಸೂರು,
ಸೀತಾರಾಮ ಎಂ.ಹುಣ್ಸೆಕಟ್ಟೆ, ಸತೀಶ್ ಭಂಡಾರಿ ದಂಪತಿ ನಾಳ, ಪುಷ್ಪಾ ಉದಯ ಗೇರುಕಟ್ಟೆ ದಂಪತಿಗಳನ್ನು ಸನ್ಮಾನಿಸಿ,
ಗೌರವಿಸಿದರು.
ಬೆಳ್ತಂಗಡಿ ವಲಯ ಮೇಲ್ವಿಚಾರಕ ಜಿ.ರವಿ ಸ್ವಾಗತಿಸಿದರು. ರಾಜೇಶ್ ಪೆಂರ್ಬುಡ ನಿರೂಪಿಸಿದರು.ಕಳಿಯ ಸೇವಾ ಪ್ರತಿನಿಧಿ ಸೌಮ್ಯ ವಿ.ಶೆಟ್ಟಿ ವಂದಿಸಿದರು.

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!