25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 12 ವಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ತಂಡಗಳು ಈಗಾಗಲೇ ರಚನೆಯಾಗಿದ್ದು ಆ.7 ರಂದು ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪ್ರಿಯ ಆಗ್ನೇಸ್ ಹಾಗೂ ಅಭಿವೃದ್ಧಿ ಯೋಜನಾಧಿಕಾರಿಗಳು ಹಿರಿಯ ವಿದ್ಯಾರ್ಥಿಗಳ ತಂಡದ ರಚನೆ ಮಹತ್ವ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಂಗನವಾಡಿ ಕೇಂದ್ರದ ಭದ್ರ ಬುನಾದಿಯಾಗಿದೆ. ಅಂಗನವಾಡಿಯ ಅಭಿವೃದ್ಧಿಗೆ ಇಲಾಖೆಯ ಸಹಕಾರದೊಂದಿಗೆ ಹಿರಿಯ ವಿದ್ಯಾರ್ಥಿಗಳ ತಂಡದ ಸಹಕಾರ ಅತ್ಯಗತ್ಯವಾಗಿದೆ ಅಂಗನವಾಡಿ ಉಳಿವಿಕೆಗೆ ಹಿರಿಯ ವಿದ್ಯಾರ್ಥಿಗಳ ತಂಡ ಬಲವಾಗಿ ನಿಲ್ಲಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಸಂದೀಪ್ ರವರ ಕಾರ್ಯಕ್ರಮದ ಉದ್ಘಾಟಕರಾಗಿ ಹಿರಿಯ ವಿದ್ಯಾರ್ಥಿಗಳು ಅಂಗನವಾಡಿ ಅಭಿವೃದ್ಧಿಗೆ ಕೊಡುಗೆಗಳನ್ನು ನೀಡಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಮತಿ ವಾಣಿಶ್ರೀ ಹಿರಿಯ ಮೇಲ್ವಿಚಾರಕಿ ಸ್ವಾಗತಿಸಿದರು. ಶ್ರೀಮತಿ ಸುಮನ ಮೇಲ್ವಿಚಾರಕಿ ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಅನ್ನಪೂರ್ಣ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು. ಕು.ಲಲಿತ ಮೇಲ್ವಿಚಾರಕಿ ಆಟದ ಮೂಲಕ ವಿದ್ಯಾರ್ಥಿಗಳನ್ನು ಪರಿಚಯ ಮಾಡಿಸಿದರು. ಶ್ರೀಮತಿ ಗುಲಾಬಿ ಮೇಲ್ವಿಚಾರಕಿ ವಂದಿಸಿದರು.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!