37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಸಂಘ-ಸಂಸ್ಥೆಗಳುಸಮಸ್ಯೆ

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ತಡ ರಾತ್ರಿ 1.30ಕ್ಕೆ ಕುಸಿದಿರುವ ಘಟನೆ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು ಬಿಟ್ಟ ಶಬ್ದ ಕೇಳಿ ಮನೆಯವರು ಎಚ್ಚರ ಗೊಂಡಿದ್ದರಿಂದ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಸಿತದಿಂದ ಮನೆಯ ನಿತ್ಯ ಬಳಕೆಯ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿವೆ. ವಿಷಯ ತಿಳಿದ ಶಾಸಕ ಹರೀಶ್ ಪೂಂಜ ಹಾಗೂ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಕುಸಿತಗೊಂಡಿದ್ದ ಮನೆಯನ್ನು ವೀಕ್ಷಿಸಿದರು.

ಮನೆಯ ಕೂದಲೆಳೆಯ ಅಂತರದಲ್ಲೇ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಕಂಪ್ರೆಸರ್ ಹಾಗೂ ಬ್ರೇಕರ್ ಮೂಲಕ ಕಪ್ಪು ಕಲ್ಲು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ ಹಾಗೂ ವೈಬ್ರೇಟರ್ ಒತ್ತಡಕ್ಕೆ ಕಳೆದ ಒಂದು ವರುಷಗಳ ಹಿಂದೆಯೇ ಗೋಡೆಯಲ್ಲಿ ಬಿರುಕು ಮೂಡಿದ್ದು ಈ ಬಗ್ಗೆ ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರಕ್ಕೆ ಮನೆಯವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆಯೇ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ

Suddi Udaya
error: Content is protected !!