September 6, 2026
ಅಪಘಾತಸಂಘ-ಸಂಸ್ಥೆಗಳುಸಮಸ್ಯೆ

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ತಡ ರಾತ್ರಿ 1.30ಕ್ಕೆ ಕುಸಿದಿರುವ ಘಟನೆ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು ಬಿಟ್ಟ ಶಬ್ದ ಕೇಳಿ ಮನೆಯವರು ಎಚ್ಚರ ಗೊಂಡಿದ್ದರಿಂದ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಸಿತದಿಂದ ಮನೆಯ ನಿತ್ಯ ಬಳಕೆಯ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿವೆ. ವಿಷಯ ತಿಳಿದ ಶಾಸಕ ಹರೀಶ್ ಪೂಂಜ ಹಾಗೂ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಕುಸಿತಗೊಂಡಿದ್ದ ಮನೆಯನ್ನು ವೀಕ್ಷಿಸಿದರು.

ಮನೆಯ ಕೂದಲೆಳೆಯ ಅಂತರದಲ್ಲೇ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಕಂಪ್ರೆಸರ್ ಹಾಗೂ ಬ್ರೇಕರ್ ಮೂಲಕ ಕಪ್ಪು ಕಲ್ಲು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ ಹಾಗೂ ವೈಬ್ರೇಟರ್ ಒತ್ತಡಕ್ಕೆ ಕಳೆದ ಒಂದು ವರುಷಗಳ ಹಿಂದೆಯೇ ಗೋಡೆಯಲ್ಲಿ ಬಿರುಕು ಮೂಡಿದ್ದು ಈ ಬಗ್ಗೆ ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರಕ್ಕೆ ಮನೆಯವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆಯೇ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya
error: Content is protected !!