22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಸಂಘ-ಸಂಸ್ಥೆಗಳುಸಮಸ್ಯೆ

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ತಡ ರಾತ್ರಿ 1.30ಕ್ಕೆ ಕುಸಿದಿರುವ ಘಟನೆ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು ಬಿಟ್ಟ ಶಬ್ದ ಕೇಳಿ ಮನೆಯವರು ಎಚ್ಚರ ಗೊಂಡಿದ್ದರಿಂದ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಸಿತದಿಂದ ಮನೆಯ ನಿತ್ಯ ಬಳಕೆಯ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿವೆ. ವಿಷಯ ತಿಳಿದ ಶಾಸಕ ಹರೀಶ್ ಪೂಂಜ ಹಾಗೂ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಕುಸಿತಗೊಂಡಿದ್ದ ಮನೆಯನ್ನು ವೀಕ್ಷಿಸಿದರು.

ಮನೆಯ ಕೂದಲೆಳೆಯ ಅಂತರದಲ್ಲೇ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಕಂಪ್ರೆಸರ್ ಹಾಗೂ ಬ್ರೇಕರ್ ಮೂಲಕ ಕಪ್ಪು ಕಲ್ಲು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ ಹಾಗೂ ವೈಬ್ರೇಟರ್ ಒತ್ತಡಕ್ಕೆ ಕಳೆದ ಒಂದು ವರುಷಗಳ ಹಿಂದೆಯೇ ಗೋಡೆಯಲ್ಲಿ ಬಿರುಕು ಮೂಡಿದ್ದು ಈ ಬಗ್ಗೆ ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರಕ್ಕೆ ಮನೆಯವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆಯೇ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya
error: Content is protected !!