September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ, ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಕಾರ್ಯಕ್ರಮ ಆ.8 ರಂದು ನಡೆಯಿತು.

ಬೆಳ್ತಂಗಡಿಯ ಧಾರ್ಮಿಕ ಮುಖಂಡ,ಬೆಂಗಳೂರು ಉದ್ಯಮಿ, ದಾನಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಅವರ ಧರ್ಮಪತ್ನಿ ತಾರಾ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು ಇವರು ಪ್ರಸಾದ ರೂಪದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ದಾನ ಮಾಡಿ ಶುಭ ಕೋರಿದರು.

ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಡಾ | ಗೀತಾ ಕುಮಾರಿ ಟಿ. ಧಾರ್ಮಿಕ ಉಪನ್ಯಾಸ ನೀಡಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ವೈದ್ಯ ಡಾ | ಶಮಂತ್‌ ವೈ.ಕೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ ಸ್ಕೂಲ್ ಕೌನ್ಸಿಲ‌ರ್ ನಿವೇದಿತಾ ಪ್ರಸನ್ನ ಹಾಜರಿದ್ದರು.

Related posts

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya
error: Content is protected !!