July 25, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

ಬೆಳ್ತಂಗಡಿ : ಆ.6 ರಂದು ಧಮ೯ಸ್ಥಳದ ಪಾಂಗಳ ಎಂಬಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯೂಟ್ಯೂಬರ್‌ಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳು ಮತ್ತು ಮೈಸೂರು ವಿಭಾಗೀಯ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ತನಿಖೆಯ ಹಾದಿ ತಪ್ಪಿಸುವ ದುರುದುದ್ದೇಶದಿಂದ ಸ್ಥಳೀಯ ಕಿಡಿಗೇಡಿಗಳು ಚೆನ್ನರಾಯಪಟ್ಟಣದ ದಲಿತ ಸಮುದಾಯದ ಯೂಟ್ಯೂಬರ್ ಅಭಿಷೇಕ್ ಸಹಿತ ನಾಲ್ಕು ಮಂದಿಗಳ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ್ದಾರೆ ಹಾಗೂ ಕ್ಯಾಮೆರಾ, ವಾಹನ ಇನ್ನಿತರ ಸಲಕರಣೆಗಳಿಗೆ ಹಾನಿ ಮಾಡಿದ್ದಾರೆ. ಸಂವಿಧಾನದ ನಾಲ್ಕನೇಯ ಅಂಗವೆಂದೇ ಕರೆಯಲ್ಪಡುವ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಖಂಡಿಸಿದರು.

ಗಾಯಗೊಂಡ ಇತರೆ ಮಾಧ್ಯಮದವರ ಆರೋಗ್ಯ ವಿಚಾರಿಸಿ ಅವರಿಗೆ ನ್ಯಾಯ ಒದಗಿಸುವ ಸಲುವಾಗಿ ಈ ಬಗ್ಗೆ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಾಗುವುದು ಎಂದು ದಸಂಸ ನಾಯಕರು ತಿಳಿಸಿದರು. ನಿಯೋಗದಲ್ಲಿ ಬೆಳ್ತಂಗಡಿಯ ಪ್ರಮುಖರಾದ ಶೇಖರ್ ಕುಕ್ಕೇಡಿ, ರಮೇಶ್ ಆರ್, ಬಿ.ಕೆ.ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರು ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ,ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya
error: Content is protected !!