23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಸಂಘ-ಸಂಸ್ಥೆಗಳು

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.10ರಂದು ಸಂಘದ ಸಹಕಾರಿ ಸಭಾಭವನದಲ್ಲಿ ಜರುಗಿತು. ಸಂಘದ ವಸಂತ ಮಜಲು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘವು ಪ್ರಸಕ್ತ ಸಾಲಿನಲ್ಲಿ ಈ ಸಾಲಿನಲ್ಲಿ ರೂ.300. 34.ಕೋಟಿ ವ್ಯವಹಾರ ನಡೆಸಿ, ರೂ.1.13 ಕೋಟಿ ನಿವ್ವಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ.16ಡಿವಿಡೆಂಡ್ ನೀಡುವುದಾಗಿ ಪೋಷಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ , ನಿರ್ದೇಶಕರಾದ ಹರಿದಾಸ್ ಪಡಂತ್ತಾಯ, ಬಾಲಕೃಷ್ಣ ಬಿರ್ಮೊಟ್ಟು, ಉದಿತ್, ಕೇಶವ ಪೂಜಾರಿ, ಗೋಪಾಲ ಬನ, ಲೋಕೇಶ್, ಕುಶಾಲಪ್ಪ ಗೌಡ, ಮಮತಾ, ಚಂದ್ರಾವತಿ ಹಾಗೂ ಸಂಘದ ಸರ್ವ ಸದಸ್ಯರು, ಡಿ.ಸಿ.ಸಿ. ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಅತಿ ಹೆಚ್ಚು ಪೈಪ್ ಬಿಡಿ ಭಾಗಗಳನ್ನು ಖರೀದಿಸಿದ ಸಂಘದ ಸದಸ್ಯರಾದ ಅನುದೀಪ್, ಲಕ್ಷ್ಮಿ, ಶೀಲಾ, ಶಿವರಾಮ ಮಡಿವಾಳ, ಲೀಲಾವತಿ, ಶಿವರಾಮ, ಅತಿ ಹೆಚ್ಚು ರಸಗೊಬ್ಬರ ಖರಿದಿ ಪೆಲಿಕ್ಷ್ ಕೊರಯ ಅವರನ್ನು ಗುರುತಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಶಿಕ್ಷಕರಾದ ಲಕ್ಷ್ಮೀನಾರಾಯಣ, ನಿವೃತ್ತ ಅಂಚೆಪಾಲಕ ಡಾಕಯ್ಯ ಗೌಡ ಕ್ರೀಡೆಯಲ್ಲಿ , ಚಿರಾಗ್, ಶ್ರಜನ್ ರನ್ನು ಅತಿ ಹೆಚ್ಚು ಅಂಕ ಗಳಿಸಿದ ನಮೃತಾ, ಆಕಾಂಕ್ಷ, ಮಾನ್ಯ ವೈ., ಆಕರ್ಷ ಇವರನ್ನು ಸನ್ಮಾನಿಸಲಾಯಿತು .

ನಿರ್ದೇಶಕ ಶೇಖರ್ ನಾಯ್ಕ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ವಾರ್ಷಿಕ ವರದಿ ವಾಚಿಸಿದರು. ಲೆಕ್ಕ ಪತ್ರ ಸಿಬ್ಬಂದಿ ಸಂತೋಷ ವಾಚಿಸಿದರು ರಾಜೇಶ್ ಪೆಂರ್ಬಡ ಕಾರ್ಯಕ್ರಮ ನಿರೂಪಿಸಿಸಿಬ್ಬಂದಿ ಸಂತೋಷ್ ಕುಮಾರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya
error: Content is protected !!