22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿ‌ಕೆ ಇವರ ಜಮೀನೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆಯೊಂದು ಬಿದ್ದಿದೆ.

ಕಳೆದ ಹಲವು ಸಮಯದಿಂದ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಅರಣ್ಯ ಇಲಾಖೆಯವರು ಜಮೀನಿನಲ್ಲಿ ಬೋನು ಇಟ್ಟಿದ್ದರು. ಈ ಬೋನಿಗೆ ಚಿರತೆ ಬಿದ್ದಿದೆ.ಚಿರತೆಯೊಂದು ಗ್ರಾಮದಲ್ಲಿ ಆಗಾಗ ಓಡಾಡುತ್ತಾ ಗ್ರಾಮದ ನಾಯಿ, ಕೋಳಿ, ಬೆಕ್ಕು, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಾಗಾಗಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.

ಚಿರತೆ ಬೋನಿಗೆ ಬಿದ್ದಿರುವ ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿ ಚಿರತೆಯನ್ನು ವೀಕ್ಷಣೆ ಮಾಡಿದರು.ಇಲಾಖೆಯ ಮೇಲಾಧಿಕಾರಿಗಳ ಸೂಚನೆಯಿಂದ ದೂರದ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಭರತ್ ಅವರು ತಿಳಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya
error: Content is protected !!