23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ,
ಉಪ್ಪಿನಂಗಡಿ ಠಾಣೆ ಸೇರಿದಂತೆ ವಿವಿಧ ಠಾಣೆಯಲ್ಲಿ ದಾಖಲಾದ
ಪ್ರಕರಣಗಳ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ
ತಲೆ ಮರೆಸಿಕೊಂಡಿದ್ದ ಆರೋಪಿಸಿಯನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣಾ ಅಕ್ರ:200/2017
ಕಲಂ:392 ಐ.ಪಿ.ಸಿ, 25 27 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದತಲೆಮರೆಸಿಕೊಂಡಿದ್ದ ಕೇರಳ, ತ್ರಿಶೋರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ.ಎ ಎಂಬಾತನನ್ನು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕರಾದ ಕೌಶಿಕ್ ರವರ ನೇತೃತ್ವದ, ಹೆಚ್.ಸಿ 685 ಪ್ರಶಾಂತ್ ರೈ, ಹೆಚ್.ಸಿ 1028 ಗಣೇಶ್, ಸಿಪಿಸಿ 1944 ಮ್ಯಾಥ್ಯೂ ವರ್ಗೀಸ್ ಹಾಗೂ ಸಿಪಿಸಿ 2283 ಶ್ರೀಶೈಲ ಎಂ.ಕೆ ರವರನ್ನು ಒಳಗೊಂಡ ವಿಶೇಷ ತಂಡವು ಕೇರಳದಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಪುತ್ತೂರು ನಗರ ಠಾಣೆ , ಉಪ್ಪಿನಂಗಡಿ ಠಾಣೆ, ಧರ್ಮಸ್ಥಳ ಠಾಣೆಗಳಲ್ಲಿ ಪ್ರಕರಣಗಳಿದ್ದು, ಅಲ್ಲದೇ ಕೇರಳ ರಾಜ್ಯದ ತ್ರಿಶೋರ್ ಜಿಲ್ಲೆಯಲ್ಲಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿರುತ್ತದೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ ವಿತರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya
error: Content is protected !!