25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ,
ಉಪ್ಪಿನಂಗಡಿ ಠಾಣೆ ಸೇರಿದಂತೆ ವಿವಿಧ ಠಾಣೆಯಲ್ಲಿ ದಾಖಲಾದ
ಪ್ರಕರಣಗಳ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ
ತಲೆ ಮರೆಸಿಕೊಂಡಿದ್ದ ಆರೋಪಿಸಿಯನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣಾ ಅಕ್ರ:200/2017
ಕಲಂ:392 ಐ.ಪಿ.ಸಿ, 25 27 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದತಲೆಮರೆಸಿಕೊಂಡಿದ್ದ ಕೇರಳ, ತ್ರಿಶೋರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ.ಎ ಎಂಬಾತನನ್ನು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕರಾದ ಕೌಶಿಕ್ ರವರ ನೇತೃತ್ವದ, ಹೆಚ್.ಸಿ 685 ಪ್ರಶಾಂತ್ ರೈ, ಹೆಚ್.ಸಿ 1028 ಗಣೇಶ್, ಸಿಪಿಸಿ 1944 ಮ್ಯಾಥ್ಯೂ ವರ್ಗೀಸ್ ಹಾಗೂ ಸಿಪಿಸಿ 2283 ಶ್ರೀಶೈಲ ಎಂ.ಕೆ ರವರನ್ನು ಒಳಗೊಂಡ ವಿಶೇಷ ತಂಡವು ಕೇರಳದಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಪುತ್ತೂರು ನಗರ ಠಾಣೆ , ಉಪ್ಪಿನಂಗಡಿ ಠಾಣೆ, ಧರ್ಮಸ್ಥಳ ಠಾಣೆಗಳಲ್ಲಿ ಪ್ರಕರಣಗಳಿದ್ದು, ಅಲ್ಲದೇ ಕೇರಳ ರಾಜ್ಯದ ತ್ರಿಶೋರ್ ಜಿಲ್ಲೆಯಲ್ಲಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿರುತ್ತದೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!