22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿ‌ಕೆ ಇವರ ಜಮೀನೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆಯೊಂದು ಬಿದ್ದಿದೆ.

ಕಳೆದ ಹಲವು ಸಮಯದಿಂದ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಅರಣ್ಯ ಇಲಾಖೆಯವರು ಜಮೀನಿನಲ್ಲಿ ಬೋನು ಇಟ್ಟಿದ್ದರು. ಈ ಬೋನಿಗೆ ಚಿರತೆ ಬಿದ್ದಿದೆ.ಚಿರತೆಯೊಂದು ಗ್ರಾಮದಲ್ಲಿ ಆಗಾಗ ಓಡಾಡುತ್ತಾ ಗ್ರಾಮದ ನಾಯಿ, ಕೋಳಿ, ಬೆಕ್ಕು, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಾಗಾಗಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.

ಚಿರತೆ ಬೋನಿಗೆ ಬಿದ್ದಿರುವ ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿ ಚಿರತೆಯನ್ನು ವೀಕ್ಷಣೆ ಮಾಡಿದರು.ಇಲಾಖೆಯ ಮೇಲಾಧಿಕಾರಿಗಳ ಸೂಚನೆಯಿಂದ ದೂರದ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಭರತ್ ಅವರು ತಿಳಿಸಿದ್ದಾರೆ.

Related posts

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya
error: Content is protected !!