25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿ‌ಕೆ ಇವರ ಜಮೀನೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆಯೊಂದು ಬಿದ್ದಿದೆ.

ಕಳೆದ ಹಲವು ಸಮಯದಿಂದ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಅರಣ್ಯ ಇಲಾಖೆಯವರು ಜಮೀನಿನಲ್ಲಿ ಬೋನು ಇಟ್ಟಿದ್ದರು. ಈ ಬೋನಿಗೆ ಚಿರತೆ ಬಿದ್ದಿದೆ.ಚಿರತೆಯೊಂದು ಗ್ರಾಮದಲ್ಲಿ ಆಗಾಗ ಓಡಾಡುತ್ತಾ ಗ್ರಾಮದ ನಾಯಿ, ಕೋಳಿ, ಬೆಕ್ಕು, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಾಗಾಗಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.

ಚಿರತೆ ಬೋನಿಗೆ ಬಿದ್ದಿರುವ ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿ ಚಿರತೆಯನ್ನು ವೀಕ್ಷಣೆ ಮಾಡಿದರು.ಇಲಾಖೆಯ ಮೇಲಾಧಿಕಾರಿಗಳ ಸೂಚನೆಯಿಂದ ದೂರದ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಭರತ್ ಅವರು ತಿಳಿಸಿದ್ದಾರೆ.

Related posts

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!