September 6, 2026
Uncategorized

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ,
ಉಪ್ಪಿನಂಗಡಿ ಠಾಣೆ ಸೇರಿದಂತೆ ವಿವಿಧ ಠಾಣೆಯಲ್ಲಿ ದಾಖಲಾದ
ಪ್ರಕರಣಗಳ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ
ತಲೆ ಮರೆಸಿಕೊಂಡಿದ್ದ ಆರೋಪಿಸಿಯನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣಾ ಅಕ್ರ:200/2017
ಕಲಂ:392 ಐ.ಪಿ.ಸಿ, 25 27 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದತಲೆಮರೆಸಿಕೊಂಡಿದ್ದ ಕೇರಳ, ತ್ರಿಶೋರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ.ಎ ಎಂಬಾತನನ್ನು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕರಾದ ಕೌಶಿಕ್ ರವರ ನೇತೃತ್ವದ, ಹೆಚ್.ಸಿ 685 ಪ್ರಶಾಂತ್ ರೈ, ಹೆಚ್.ಸಿ 1028 ಗಣೇಶ್, ಸಿಪಿಸಿ 1944 ಮ್ಯಾಥ್ಯೂ ವರ್ಗೀಸ್ ಹಾಗೂ ಸಿಪಿಸಿ 2283 ಶ್ರೀಶೈಲ ಎಂ.ಕೆ ರವರನ್ನು ಒಳಗೊಂಡ ವಿಶೇಷ ತಂಡವು ಕೇರಳದಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಪುತ್ತೂರು ನಗರ ಠಾಣೆ , ಉಪ್ಪಿನಂಗಡಿ ಠಾಣೆ, ಧರ್ಮಸ್ಥಳ ಠಾಣೆಗಳಲ್ಲಿ ಪ್ರಕರಣಗಳಿದ್ದು, ಅಲ್ಲದೇ ಕೇರಳ ರಾಜ್ಯದ ತ್ರಿಶೋರ್ ಜಿಲ್ಲೆಯಲ್ಲಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿರುತ್ತದೆ.

Related posts

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya
error: Content is protected !!