22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ,
ಉಪ್ಪಿನಂಗಡಿ ಠಾಣೆ ಸೇರಿದಂತೆ ವಿವಿಧ ಠಾಣೆಯಲ್ಲಿ ದಾಖಲಾದ
ಪ್ರಕರಣಗಳ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ
ತಲೆ ಮರೆಸಿಕೊಂಡಿದ್ದ ಆರೋಪಿಸಿಯನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣಾ ಅಕ್ರ:200/2017
ಕಲಂ:392 ಐ.ಪಿ.ಸಿ, 25 27 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದತಲೆಮರೆಸಿಕೊಂಡಿದ್ದ ಕೇರಳ, ತ್ರಿಶೋರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ.ಎ ಎಂಬಾತನನ್ನು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕರಾದ ಕೌಶಿಕ್ ರವರ ನೇತೃತ್ವದ, ಹೆಚ್.ಸಿ 685 ಪ್ರಶಾಂತ್ ರೈ, ಹೆಚ್.ಸಿ 1028 ಗಣೇಶ್, ಸಿಪಿಸಿ 1944 ಮ್ಯಾಥ್ಯೂ ವರ್ಗೀಸ್ ಹಾಗೂ ಸಿಪಿಸಿ 2283 ಶ್ರೀಶೈಲ ಎಂ.ಕೆ ರವರನ್ನು ಒಳಗೊಂಡ ವಿಶೇಷ ತಂಡವು ಕೇರಳದಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಪುತ್ತೂರು ನಗರ ಠಾಣೆ , ಉಪ್ಪಿನಂಗಡಿ ಠಾಣೆ, ಧರ್ಮಸ್ಥಳ ಠಾಣೆಗಳಲ್ಲಿ ಪ್ರಕರಣಗಳಿದ್ದು, ಅಲ್ಲದೇ ಕೇರಳ ರಾಜ್ಯದ ತ್ರಿಶೋರ್ ಜಿಲ್ಲೆಯಲ್ಲಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿರುತ್ತದೆ.

Related posts

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya
error: Content is protected !!