22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಹಾಕಿದ ವಿಷಯದಲ್ಲಿ ಶೇಖರ ಲಾಯಿಲ ಅವರು ನೀಡಿದ ದೂರಿನಂತೆ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 9 ರಂದು ಮಧ್ಯಾಹ್ನ ಸಮಯ ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ (43ವ) ರವರು ತನ್ನ ಮೊಬೈಲ್‌ ಪರಿಶೀಲಿಸುತ್ತಿದ್ದಾಗ, ವಸಂತ ಗಿಳಿಯಾರ್‌ ಎಂಬ ವ್ಯಕ್ತಿಯು, ಅವರ ಪೇಸ್‌ ಬುಕ್‌ ಖಾತೆಯಲ್ಲಿ, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದ್ದು, ಇದರಿಂದಾಗಿ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣೆಯಲ್ಲಿ ಅಕ್ರ : 84/2025 ಕಲಂ. 196 (1) (ಎ) 353(2) ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!