September 6, 2026
ವರದಿಸಂಘ-ಸಂಸ್ಥೆಗಳು

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.10ರಂದು ಸಂಘದ ಸಹಕಾರಿ ಸಭಾಭವನದಲ್ಲಿ ಜರುಗಿತು. ಸಂಘದ ವಸಂತ ಮಜಲು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘವು ಪ್ರಸಕ್ತ ಸಾಲಿನಲ್ಲಿ ಈ ಸಾಲಿನಲ್ಲಿ ರೂ.300. 34.ಕೋಟಿ ವ್ಯವಹಾರ ನಡೆಸಿ, ರೂ.1.13 ಕೋಟಿ ನಿವ್ವಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ.16ಡಿವಿಡೆಂಡ್ ನೀಡುವುದಾಗಿ ಪೋಷಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ , ನಿರ್ದೇಶಕರಾದ ಹರಿದಾಸ್ ಪಡಂತ್ತಾಯ, ಬಾಲಕೃಷ್ಣ ಬಿರ್ಮೊಟ್ಟು, ಉದಿತ್, ಕೇಶವ ಪೂಜಾರಿ, ಗೋಪಾಲ ಬನ, ಲೋಕೇಶ್, ಕುಶಾಲಪ್ಪ ಗೌಡ, ಮಮತಾ, ಚಂದ್ರಾವತಿ ಹಾಗೂ ಸಂಘದ ಸರ್ವ ಸದಸ್ಯರು, ಡಿ.ಸಿ.ಸಿ. ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಅತಿ ಹೆಚ್ಚು ಪೈಪ್ ಬಿಡಿ ಭಾಗಗಳನ್ನು ಖರೀದಿಸಿದ ಸಂಘದ ಸದಸ್ಯರಾದ ಅನುದೀಪ್, ಲಕ್ಷ್ಮಿ, ಶೀಲಾ, ಶಿವರಾಮ ಮಡಿವಾಳ, ಲೀಲಾವತಿ, ಶಿವರಾಮ, ಅತಿ ಹೆಚ್ಚು ರಸಗೊಬ್ಬರ ಖರಿದಿ ಪೆಲಿಕ್ಷ್ ಕೊರಯ ಅವರನ್ನು ಗುರುತಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಶಿಕ್ಷಕರಾದ ಲಕ್ಷ್ಮೀನಾರಾಯಣ, ನಿವೃತ್ತ ಅಂಚೆಪಾಲಕ ಡಾಕಯ್ಯ ಗೌಡ ಕ್ರೀಡೆಯಲ್ಲಿ , ಚಿರಾಗ್, ಶ್ರಜನ್ ರನ್ನು ಅತಿ ಹೆಚ್ಚು ಅಂಕ ಗಳಿಸಿದ ನಮೃತಾ, ಆಕಾಂಕ್ಷ, ಮಾನ್ಯ ವೈ., ಆಕರ್ಷ ಇವರನ್ನು ಸನ್ಮಾನಿಸಲಾಯಿತು .

ನಿರ್ದೇಶಕ ಶೇಖರ್ ನಾಯ್ಕ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ವಾರ್ಷಿಕ ವರದಿ ವಾಚಿಸಿದರು. ಲೆಕ್ಕ ಪತ್ರ ಸಿಬ್ಬಂದಿ ಸಂತೋಷ ವಾಚಿಸಿದರು ರಾಜೇಶ್ ಪೆಂರ್ಬಡ ಕಾರ್ಯಕ್ರಮ ನಿರೂಪಿಸಿಸಿಬ್ಬಂದಿ ಸಂತೋಷ್ ಕುಮಾರ್ ಧನ್ಯವಾದವಿತ್ತರು.

Related posts

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!