22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿ‌ಕೆ ಇವರ ಜಮೀನೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆಯೊಂದು ಬಿದ್ದಿದೆ.

ಕಳೆದ ಹಲವು ಸಮಯದಿಂದ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಅರಣ್ಯ ಇಲಾಖೆಯವರು ಜಮೀನಿನಲ್ಲಿ ಬೋನು ಇಟ್ಟಿದ್ದರು. ಈ ಬೋನಿಗೆ ಚಿರತೆ ಬಿದ್ದಿದೆ.ಚಿರತೆಯೊಂದು ಗ್ರಾಮದಲ್ಲಿ ಆಗಾಗ ಓಡಾಡುತ್ತಾ ಗ್ರಾಮದ ನಾಯಿ, ಕೋಳಿ, ಬೆಕ್ಕು, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಾಗಾಗಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.

ಚಿರತೆ ಬೋನಿಗೆ ಬಿದ್ದಿರುವ ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿ ಚಿರತೆಯನ್ನು ವೀಕ್ಷಣೆ ಮಾಡಿದರು.ಇಲಾಖೆಯ ಮೇಲಾಧಿಕಾರಿಗಳ ಸೂಚನೆಯಿಂದ ದೂರದ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಭರತ್ ಅವರು ತಿಳಿಸಿದ್ದಾರೆ.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!