22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ,
ಉಪ್ಪಿನಂಗಡಿ ಠಾಣೆ ಸೇರಿದಂತೆ ವಿವಿಧ ಠಾಣೆಯಲ್ಲಿ ದಾಖಲಾದ
ಪ್ರಕರಣಗಳ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ
ತಲೆ ಮರೆಸಿಕೊಂಡಿದ್ದ ಆರೋಪಿಸಿಯನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣಾ ಅಕ್ರ:200/2017
ಕಲಂ:392 ಐ.ಪಿ.ಸಿ, 25 27 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ಆರೋಪಿತನಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದತಲೆಮರೆಸಿಕೊಂಡಿದ್ದ ಕೇರಳ, ತ್ರಿಶೋರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ.ಎ ಎಂಬಾತನನ್ನು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕರಾದ ಕೌಶಿಕ್ ರವರ ನೇತೃತ್ವದ, ಹೆಚ್.ಸಿ 685 ಪ್ರಶಾಂತ್ ರೈ, ಹೆಚ್.ಸಿ 1028 ಗಣೇಶ್, ಸಿಪಿಸಿ 1944 ಮ್ಯಾಥ್ಯೂ ವರ್ಗೀಸ್ ಹಾಗೂ ಸಿಪಿಸಿ 2283 ಶ್ರೀಶೈಲ ಎಂ.ಕೆ ರವರನ್ನು ಒಳಗೊಂಡ ವಿಶೇಷ ತಂಡವು ಕೇರಳದಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಸದ್ರಿ ಆರೋಪಿತನ ವಿರುದ್ಧ ಪುತ್ತೂರು ನಗರ ಠಾಣೆ , ಉಪ್ಪಿನಂಗಡಿ ಠಾಣೆ, ಧರ್ಮಸ್ಥಳ ಠಾಣೆಗಳಲ್ಲಿ ಪ್ರಕರಣಗಳಿದ್ದು, ಅಲ್ಲದೇ ಕೇರಳ ರಾಜ್ಯದ ತ್ರಿಶೋರ್ ಜಿಲ್ಲೆಯಲ್ಲಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿರುತ್ತದೆ.

Related posts

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya
error: Content is protected !!