22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

ಅರಸಿನಮಕ್ಕಿ : ಹಿಂದುತ್ವ, ರಾಷ್ಟೀಯತೆಯ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಬಿಜೆಪಿಯನ್ನು ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಅವರ ತ್ಯಾಗ, ಪರಿಶ್ರಮವನ್ನು ನೆನಪಿಸಿಕೊಂಡು ಪಕ್ಷವನ್ನು ಸಧೃಡಗೊಳಿಸುವ ಕೆಲಸವನ್ನು ಅಭ್ಯಾಸ ವರ್ಗಗಳ ಮೂಲಕ ಮಾಡಲಾಗುತ್ತಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.


ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಮಹಾಶಕ್ತಿ ಕೇಂದ್ರದದ ಅಧ್ಯಕ್ಷ ಹರೀಶ್ ಕೊಯಿಲ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ರೆಖ್ಯ ಶಕ್ತಿ ಕೇಂದ್ರ ಪ್ರಮುಖ್ ಚೇತನ್ ಉಪಸ್ಥಿತರಿದ್ದರು.


ಅಭ್ಯಾಸ ವರ್ಗದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ರೈತ ಮೋರ್ಚಾ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಅಭಿಜಿತ್ ಜೈನ್ ಮಾಹಿತಿ ನೀಡಿದರು. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಸ್ವಾಗತಿಸಿದರು. ವೃಷಾಂಕ್ ಖಾಡಿಲ್ಕರ್ ನಿರೂಪಿಸಿದರು. ಎರಡೂ ಗ್ರಾಮಗಳ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya
error: Content is protected !!