September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಇಂದು(ಆ.11) ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅಧ್ಯಕ್ಷತೆಯಲ್ಲಿ ನಡೆಯಿತು.

ಪಿ ಡಿ ಓ ಸಂತೋಷ್ ಪಾಟೀಲ್ ಸ್ವಾಗತಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಿದರು. ಗ್ರಾಮಸ್ಥರ ವಿವಿದ ಅರ್ಜಿಗಳನ್ನು ಕಾರ್ಯದರ್ಶಿ ಓದಿ ಹೇಳಿದರು. ಗ್ರಾಮದ ಅಭಿವೃದ್ಧಿ ಬಗ್ಗೆ ಗಂಭೀರ ಚರ್ಚೆ ನಡೆಸಿದರು.15 ನೇ ಹಣಕಾಸಿನ ಅನುದಾನವನ್ನು ವಾರ್ಡ್ ಗಳಿಗೆ ವಿಂಗಡಿಸಲಾಯಿತು. ಅಧ್ಯಕ್ಷರ ಅನುಮತಿ ಮೇರೆಗೆ ಇತರ ವಿಷಯಗಳ ಚರ್ಚೆ ನಡೆಯಿತು.


ಈ ವೇಳೆ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಪಂಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೊರಗಪ್ಪರವರನ್ನು ಬೀಳ್ಕೊಡಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ ಕೆ, ಹರೀಶ್ ಕುಮಾರ್, ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಕುಸುಮಾ ಎನ್ ಬಂಗೇರ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ, ಶ್ರೀಮತಿ ಶಕುಂತಲ ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ರವಿ.ಎಚ್, ನಂದಿನಿ, ಸುರೇಶ್ ಗೌಡ, ಮಾನಸ ಹಾಜರಿದ್ದರು.

ಕಾರ್ಯದರ್ಶಿ ಕುಂಙ ಕೆ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
error: Content is protected !!