30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಇಂದು(ಆ.11) ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅಧ್ಯಕ್ಷತೆಯಲ್ಲಿ ನಡೆಯಿತು.

ಪಿ ಡಿ ಓ ಸಂತೋಷ್ ಪಾಟೀಲ್ ಸ್ವಾಗತಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಿದರು. ಗ್ರಾಮಸ್ಥರ ವಿವಿದ ಅರ್ಜಿಗಳನ್ನು ಕಾರ್ಯದರ್ಶಿ ಓದಿ ಹೇಳಿದರು. ಗ್ರಾಮದ ಅಭಿವೃದ್ಧಿ ಬಗ್ಗೆ ಗಂಭೀರ ಚರ್ಚೆ ನಡೆಸಿದರು.15 ನೇ ಹಣಕಾಸಿನ ಅನುದಾನವನ್ನು ವಾರ್ಡ್ ಗಳಿಗೆ ವಿಂಗಡಿಸಲಾಯಿತು. ಅಧ್ಯಕ್ಷರ ಅನುಮತಿ ಮೇರೆಗೆ ಇತರ ವಿಷಯಗಳ ಚರ್ಚೆ ನಡೆಯಿತು.


ಈ ವೇಳೆ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಪಂಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೊರಗಪ್ಪರವರನ್ನು ಬೀಳ್ಕೊಡಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ ಕೆ, ಹರೀಶ್ ಕುಮಾರ್, ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಕುಸುಮಾ ಎನ್ ಬಂಗೇರ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ, ಶ್ರೀಮತಿ ಶಕುಂತಲ ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ರವಿ.ಎಚ್, ನಂದಿನಿ, ಸುರೇಶ್ ಗೌಡ, ಮಾನಸ ಹಾಜರಿದ್ದರು.

ಕಾರ್ಯದರ್ಶಿ ಕುಂಙ ಕೆ ಧನ್ಯವಾದವಿತ್ತರು.

Related posts

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya
error: Content is protected !!