July 23, 2026
ಅಪಘಾತಜಿಲ್ಲಾ ಸುದ್ದಿವರದಿ

ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ

ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಹೈವೇ ಪಟ್ರೊಲ್ ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು.

ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾಗಿದ್ದು, ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತು ಪ್ರಪಾತದ ಅಂಚು ಜಾರುವಿಕೆ ಅಪಾಯವಾಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!