25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ ಈ ದೇಶ ಅಲ್ಲ, ಜಗತ್ತೇ ಇದೆ. ಇಂದು ನಾನು ಮಾತನಾಡುತ್ತಿದ್ದೇನೆ. ನನ್ನನ್ನು ಜೈಲಿಗೆ ಹಾಕಿ, ಅದಕ್ಕೂ ನಾನು ಸಿದ್ಧನಿದ್ದೇನೆ ಎಂದು ಭಾವುಕರಾದರು.

ಎಸ್‌ಐಟಿಯವರು ಧರ್ಮಸ್ಥಳದ ವಠಾರ ಅಗೆಯುತ್ತಿದ್ದಾರೆ, ಶವ ಹುಡುಕುತ್ತಿದ್ದಾರೆ. ನಿಮಗೆ ಅಲ್ಲಿ ಈವರೆಗೆ ಏನೂ ಸಿಕ್ಕಿಲ್ಲ, ಮುಂದೆಯೂ ಸಿಗುವುದಿಲ್ಲ. ಧರ್ಮಸ್ಥಳ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ? ನೀವೇಕೆ ಬಾಯಿ ಬಿಡುತ್ತಿಲ್ಲ? ಒಂದು ದೇವಸ್ಥಾನ ಹಾಳು ಮಾಡುವಾಗ ಸಿಎಂ ಮಾತಾಡುತ್ತಿಲ್ಲ. ನಮಗೆ ನಾಚಿಗೆ ಆಗುತ್ತಿದೆ. ಧರ್ಮಸ್ಥಳ ಹಾಳು ಮಾಡಲು ಈ ಪೂಜಾರಿ ಬಿಡುವುದಿಲ್ಲ ಎಂದರು.

Related posts

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya
error: Content is protected !!