September 6, 2026
ಅಪರಾಧ ಸುದ್ದಿವರದಿ

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

ಬೆಳ್ತಂಗಡಿ: ಮೂಡಿಗೆರೆ – ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡುಗಳಲ್ಲಿ ನಡೆದುಹೋಗುತ್ತಿದ್ದ ಈ ಟ್ರಕ್ಕಿಂಗ್ ಕಾರ್ಯಕ್ರಮವು ಅರಣ್ಯ ಕಾಯ್ದೆಗಳಿಗೆ ವಿಳಂಬವಾಗಿದ್ದು, ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆಗಳ ಸಂಯುಕ್ತ ಕಾರ್ಯಾಚರಣೆಯಿಂದ ಈ ದಾಳಿ ಯಶಸ್ವಿಯಾಗಿ ನಡೆಸಲಾಯಿತು. ಬಣಕಲ್ ಪಿಎಸ್‌ಐ ರೇಣುಕಾ ಹಾಗೂ ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರವಾಸಿಗರನ್ನು ಬಂಧಿಸಲಾಯಿತು.

ಬಂದೋಬಸ್ತಿನ ಭಾಗವಾಗಿ ಸ್ಥಳದಲ್ಲಿ ಇಟ್ಟಿದ್ದ ಎರಡು ಪ್ರವಾಸಿ ಬಸ್ಸುಗಳು ಮತ್ತು ಎರಡು ಪಿಕಪ್ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಟ್ರಕ್ಕಿಂಗ್‌ನಲ್ಲಿ ಭಾಗವಹಿಸಿದ್ದವರು ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ. ಪ್ರವಾಸಿಗರನ್ನು ನಿಷೇಧಿತ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿಯೊಬ್ಬ ಎಂಬ ಮಾಹಿತಿ ಲಭ್ಯವಾಗಿದೆ.

ಅರಣ್ಯ ಇಲಾಖೆಯ ಪೂರ್ವಾನುಮತಿ ಇಲ್ಲದೆ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುುವುದು ಅರಣ್ಯ ಕಾಯ್ದೆಯ ಉಲ್ಲಂಘನೆ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನೈಸರ್ಗಿಕ ಸಂಪತ್ತು ಹಾಗೂ ವನ್ಯಜೀವಿ ಸಂರಕ್ಷಣೆಗೆ ಪ್ರಮುಖವಾದ ಈ ಪ್ರದೇಶದಲ್ಲಿ, ಅನಧಿಕೃತ ಪ್ರವೇಶದಿಂದ ಪರಿಸರದ ಮೇಲೆ ಹಾನಿಯಾಗುವ ಸಾಧ್ಯತೆ ಇದೆ.

Related posts

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya
error: Content is protected !!