ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಆ.10 ರಂದು ನಡೆಯಿತು.

ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ ಉದಯ ನಗರ, ಸುದೆಮುಗೇರು ಪ್ರದೇಶದ ಮಕ್ಕಳು, ಹಿರಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟ ಉದ್ಘಾಟನೆ ಮಾಡಿದರು

ಪುರುಷರು, ಮಕ್ಕಳಿಗೆ ಲಿಂಬೆ ಚಮಚ ಓಟ, ಒಂಟಿ ಕಾಲಿನ ಓಟ, ಹಾಳೆ ಓಟ, ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಈ ಮೊದಲಾದ ಗ್ರಾಮೀಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಿಯಾಝ್ ಸಂಜಯನಗರ ಪಂದ್ಯಾಟವನ್ನು ನಡೆಸಿಕೊಟ್ಟರು. ವಯಸ್ಸಿನ ಮಿತಿಯನ್ನು ಲೆಕ್ಕಿಸದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಹಿರಿಯರು, ಕಿರಿಯರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷರಾದ ಇಸ್ಮಾಯಿಲ್, ಕೋಶಾಧಿಕಾರಿಯಾದ ರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ ಕ್ರೀಡಾಕೂಟವನ್ನು ನಡೆಸಿಕೊಟ್ಟರು.


ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ವಾತಂತ್ರ್ಯ ದಿನದಂದು ಸಂಜಯ್ ಗ್ಲೋಬಲ್ ಫೌಂಡೇಶನ್ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Related posts

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!