September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

ಬೆಳ್ತಂಗಡಿ: ನಾರಾವಿ ಗ್ರಾಮದ ಹಿರ್ತ್ತೊಟ್ಟು ಜಿನ್ನಪ್ಪ ಬಿ. ಪೂಜಾರಿ ಅವರ ಪತ್ನಿ, ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.

ಮಂಗಳೂರಿನ ಬೆಸೆಂಟ್‌ ಮಹಿಳಾ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ಸೆಕೆಟೇರಿಯಲ್‌ ಪ್ರಾಕ್ಟೀಸ್‌ ವಿಭಾಗದ ಸಹ ಪ್ರಾಧ್ಯಾಪಕಿಯಾಗಿರುವ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರಾಮು ಎನ್‌ ಮತ್ತು ಆರ್‌.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಹೇಮಲತಾ ಅವರು ಮಂಡಿಸಿದ ‘ಇಂಪ್ಯಾಕ್ಟ್‌ ಆಫ್‌ ಟ್ರೈನಿಂಗ್‌ ಆನ್‌ ದಿ ಸಾಫ್ಟ್‌ ಅಂಡ್‌ ಹಾರ್ಡ್‌ ಸ್ಕಿಲ್ಸ್‌ ಟುವರ್ಡ್ಸ್‌ ಎಫೀಶಿಯೆನ್ಸಿ ಆಫ್‌ ಎಂಪ್ಲಾಯಿಸ್‌ ಆಫ್‌ ಎಂಎಸ್‌ಎಂಇಎಸ್‌ ಇನ್‌ ದಕ್ಷಿಣ ಕನ್ನಡ ಡಿಸ್ಟ್ರಿಕ್‌’ (Impact of training on the Soft and Hard skills towards efficiency of employees of MSMEs in Dakshina Kannada District) ಎಂಬ ಮಹಾಪ್ರಬಂಧ ಡಾಕ್ಟರೇಟ್‌ ಪದವಿಗೆ ಆಯ್ಕೆಯಾಗಿದೆ.

ಹೇಮಲತಾ ಅವರು ಶಿರ್ವ ಮಂಚಕಲ್‌ ಗ್ರಾಮದ ಸೋಮಪ್ಪ ಮತ್ತು ಕಂಪಾಬೈ ದಂಪತಿಯ ಪುತ್ರಿ.

Related posts

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya
error: Content is protected !!