July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಉಜಿರೆಯ ವಾಣಿಜ್ಯ ಶಾಸ್ತ್ರ ವಿಭಾಗ ಮತ್ತು ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರ ಜಂಟಿಯಾಗಿ“ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ಈ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತೃತೀಯ ಬಿಕಾಂ ವಿದ್ಯಾರ್ಥಿಗಳಿಗಾಗಿ ಆ. 8ರಂದು ಎಸ್.ಡಿ.ಎಮ್ ಕಾಲೇಜಿನ ಆಡಿಟೋರಿಯಂ ನಲ್ಲಿ ನಡೆಯಿತು.

ಬೆಂಗಳೂರಿನ Reliance Skilling Academy ಸಂಸ್ಥೆಯ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ಪ್ರೀತಂ ಪ್ರಸಾದ್ ಎಸ್ ರವರು ಸಂಪನ್ಯೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ ಅವರು ಇಂದಿನ ವೇಗವಾಗಿ ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಕೇವಲ ಶೈಕ್ಷಣಿಕ ಅರ್ಹತೆಗಳು ಸಾಕಾಗುವುದಿಲ್ಲ. ಆಧುನಿಕ ಉದ್ಯೋಗ ಮಾರುಕಟ್ಟೆಯು ವಾಸ್ತವಾಗಿ ಸ್ವಯಂಚಾಲಿತ ಜಾಗತೀಕರಣ ಹಾಗೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನಗಳು ರೂಪಿಸುತ್ತಿದ್ದು, ಇದು ಹೊಸ ಅವಕಾಶಗಳೊಂದಿಗೆ ತೀವ್ರ ಸ್ಪರ್ಧೆಯನ್ನೂ ತಂದಿದೆ. ಪದವೀಧರರು ತಮ್ಮ ಕೌಶಲ್ಯಗಳನ್ನು ಕೈಗಾರಿಕಾ ಅಗತ್ಯಗಳಿಗೆ ಹೊಂದಿಸಿಕೊಳ್ಳಬೇಕು, ನಿರಂತರ ಕಲಿಕೆಯಿಂದ ಇದು ಸಾಧ್ಯ ಮತ್ತು ಬದಲಾಗುತ್ತಿರುವ ಕೆಲಸದ ಪರಿಸರಗಳಿಗೆ ಹೊಂದಿಕೊಳ್ಳಬೇಕು, ಆಗ ಮಾತ್ರ ಅವರು ಪ್ರಸ್ತುತ ಮತ್ತು ಸ್ಪರ್ಧಾತ್ಮಕವಾಗಿರಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ ರವರು ಮಾರ್ಗದರ್ಶನದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ರತ್ನವತಿ ಕೆ ರವರು ಕಾರ್ಯಕ್ರಮದಲ್ಲಿ ಉಪಸ್ಥಿತಿಯಲ್ಲಿ ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು ನಿರ್ದೇಶಕರಾದ ಡಾ ನಾಗರಾಜ ಪೂಜಾರಿ ಕಾರ್ಯಕ್ರಮವನ್ನು ಸಂಘಟಿಸಿದ್ದರು ಮತ್ತು ವೃತ್ತಿ ಮಾರ್ಗದರ್ಶನ ಕೇಂದ್ರದ ಸದಸ್ಯರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಸಹಕಾರ ನೀಡಿದರು.

Related posts

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!