July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು 10 ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ” ವು ತೃತೀಯ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗಾಗಿ ಜು.30 ರಂದು ಪ್ರಾರಂಭವಾಗಿ ಆ.09 ರವರೆಗೆ ನಡೆಯಿತು.

ಬೆಂಗಳೂರಿನ ಆರ್ಯ-ಚಾಣಕ್ಯ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಈ ಸಂಸ್ಥೆಯ ಸಹಾಯಕ ನಿರ್ದೇಶಕ ಮತ್ತು ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣದ ಸಲಹೆಗಾರ ನಾರಾಯಣ ಆರ್ ರವರು ಸಂಪನ್ಯೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು ಮತ್ತು ಅವರು SAP-FICO (Systems, Applications & Products in Data Processing: Financial Accounting and Controlling) ತಂತ್ರಜ್ಞಾವು ಹಣಕಾಸು ನಿರ್ವಹಣಾ ಜ್ಞಾನ ಹೊಂದಿರುವವರಿಗೆ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಬ್ಯಾಂಕಿಂಗ್, ಉತ್ಪಾದನಾ, ಐಟಿ ಹಾಗೂ ಕಾನ್ಸಲ್ಟಿಂಗ್ ಕಂಪನಿಗಳ ಪ್ರಮುಖ ಹುದ್ದೆಗಳಲ್ಲಿ ಆರ್ಥಿಕ ತಾಂತ್ರಿಕ ಸಲಹೆಗೆರರು, ವ್ಯವಹಾರಿಕ-ಹಣಕಾಸಿನ ವಿಶ್ಲೇಷಕರು, ಆರ್ಥಿಕ- ತಾಂತ್ರಿಕ ನಿರ್ವಾಹಕರು, ತರಬೇತುದಾರರು ಮತ್ತು ಹಣಕಾಸು ನಿರ್ವಹಣೆಯ ಸಲಹೆಗಾರರು ಇತ್ಯಾದಿ ಉದ್ಯೋಗಗಳ ಜೊತೆಗೆ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಅಪಾರ ಬೇಡಿಕೆ SAP-FICO ಸಲಹೆಗಾರರಿಗೆ ಇದೆ. ತಾಂತ್ರಿಕ ಪ್ರಗತಿಯ ಹೊಸ ಯುಗವನ್ನು ನಿರೂಪಿಸುತ್ತಿದ್ದು, ಇವುಗಳನ್ನು ಆಧರಿಸಿದ ಭವಿಷ್ಯದ ಅವಕಾಶಗಳು ಅಪಾರವಾಗಿವೆ.

SAP-FICO ತಂತ್ರಜ್ಞಾವು ವಿದ್ಯಾರ್ಥಿಗಳ ಗುಣಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮತ್ತು ಪ್ರಾಯೋಗಿಕ ಕೌಶಲ್ಯ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ವಿನ್ಯಾಸಗೊಳಿಸಲಾದ ತರಬೇತಿಯಲ್ಲಿ ಸಮಗ್ರ ಆಧುನಿಕ ಕೈಗಾರಿಕೆಗಳಲ್ಲಿ ಬಳಸುವ ದತ್ತಾಂಶ ವಿಶ್ಲೇಷಣೆ ಮತ್ತು ವರದಿ ಮಾಡುವ ಸಾಧನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮ ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ. ಮಾರ್ಗದರ್ಶನದಲ್ಲಿ. ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು ನಿರ್ದೇಶಕರಾದ ಡಾ ನಾಗರಾಜ ಪೂಜಾರಿ ಕಾರ್ಯಕ್ರಮವನ್ನು ಸಂಘಟಿಸಿದ್ದರು ಮತ್ತು ವೃತ್ತಿ ಮಾರ್ಗದರ್ಶನ ಕೇಂದ್ರದ ಸದಸ್ಯರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಸಹಕಾರ ನೀಡಿದರು. ಕಾರ್ಯಕ್ರಮದಲ್ಲಿ 76 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.

Related posts

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya
error: Content is protected !!