September 6, 2026
ಅಪಘಾತಜಿಲ್ಲಾ ಸುದ್ದಿವರದಿ

ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ

ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಹೈವೇ ಪಟ್ರೊಲ್ ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು.

ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾಗಿದ್ದು, ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತು ಪ್ರಪಾತದ ಅಂಚು ಜಾರುವಿಕೆ ಅಪಾಯವಾಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸತತ 2ನೇ ಬಾರಿಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಮಾನ್ಯತಾ ಪ್ರಮಾಣಪತ್ರ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya
error: Content is protected !!