July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ ಈ ದೇಶ ಅಲ್ಲ, ಜಗತ್ತೇ ಇದೆ. ಇಂದು ನಾನು ಮಾತನಾಡುತ್ತಿದ್ದೇನೆ. ನನ್ನನ್ನು ಜೈಲಿಗೆ ಹಾಕಿ, ಅದಕ್ಕೂ ನಾನು ಸಿದ್ಧನಿದ್ದೇನೆ ಎಂದು ಭಾವುಕರಾದರು.

ಎಸ್‌ಐಟಿಯವರು ಧರ್ಮಸ್ಥಳದ ವಠಾರ ಅಗೆಯುತ್ತಿದ್ದಾರೆ, ಶವ ಹುಡುಕುತ್ತಿದ್ದಾರೆ. ನಿಮಗೆ ಅಲ್ಲಿ ಈವರೆಗೆ ಏನೂ ಸಿಕ್ಕಿಲ್ಲ, ಮುಂದೆಯೂ ಸಿಗುವುದಿಲ್ಲ. ಧರ್ಮಸ್ಥಳ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ? ನೀವೇಕೆ ಬಾಯಿ ಬಿಡುತ್ತಿಲ್ಲ? ಒಂದು ದೇವಸ್ಥಾನ ಹಾಳು ಮಾಡುವಾಗ ಸಿಎಂ ಮಾತಾಡುತ್ತಿಲ್ಲ. ನಮಗೆ ನಾಚಿಗೆ ಆಗುತ್ತಿದೆ. ಧರ್ಮಸ್ಥಳ ಹಾಳು ಮಾಡಲು ಈ ಪೂಜಾರಿ ಬಿಡುವುದಿಲ್ಲ ಎಂದರು.

Related posts

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

Suddi Udaya
error: Content is protected !!