September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ ಈ ದೇಶ ಅಲ್ಲ, ಜಗತ್ತೇ ಇದೆ. ಇಂದು ನಾನು ಮಾತನಾಡುತ್ತಿದ್ದೇನೆ. ನನ್ನನ್ನು ಜೈಲಿಗೆ ಹಾಕಿ, ಅದಕ್ಕೂ ನಾನು ಸಿದ್ಧನಿದ್ದೇನೆ ಎಂದು ಭಾವುಕರಾದರು.

ಎಸ್‌ಐಟಿಯವರು ಧರ್ಮಸ್ಥಳದ ವಠಾರ ಅಗೆಯುತ್ತಿದ್ದಾರೆ, ಶವ ಹುಡುಕುತ್ತಿದ್ದಾರೆ. ನಿಮಗೆ ಅಲ್ಲಿ ಈವರೆಗೆ ಏನೂ ಸಿಕ್ಕಿಲ್ಲ, ಮುಂದೆಯೂ ಸಿಗುವುದಿಲ್ಲ. ಧರ್ಮಸ್ಥಳ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ? ನೀವೇಕೆ ಬಾಯಿ ಬಿಡುತ್ತಿಲ್ಲ? ಒಂದು ದೇವಸ್ಥಾನ ಹಾಳು ಮಾಡುವಾಗ ಸಿಎಂ ಮಾತಾಡುತ್ತಿಲ್ಲ. ನಮಗೆ ನಾಚಿಗೆ ಆಗುತ್ತಿದೆ. ಧರ್ಮಸ್ಥಳ ಹಾಳು ಮಾಡಲು ಈ ಪೂಜಾರಿ ಬಿಡುವುದಿಲ್ಲ ಎಂದರು.

Related posts

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!