22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿವರದಿ

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

ಬೆಳ್ತಂಗಡಿ: ಮೂಡಿಗೆರೆ – ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡುಗಳಲ್ಲಿ ನಡೆದುಹೋಗುತ್ತಿದ್ದ ಈ ಟ್ರಕ್ಕಿಂಗ್ ಕಾರ್ಯಕ್ರಮವು ಅರಣ್ಯ ಕಾಯ್ದೆಗಳಿಗೆ ವಿಳಂಬವಾಗಿದ್ದು, ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆಗಳ ಸಂಯುಕ್ತ ಕಾರ್ಯಾಚರಣೆಯಿಂದ ಈ ದಾಳಿ ಯಶಸ್ವಿಯಾಗಿ ನಡೆಸಲಾಯಿತು. ಬಣಕಲ್ ಪಿಎಸ್‌ಐ ರೇಣುಕಾ ಹಾಗೂ ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರವಾಸಿಗರನ್ನು ಬಂಧಿಸಲಾಯಿತು.

ಬಂದೋಬಸ್ತಿನ ಭಾಗವಾಗಿ ಸ್ಥಳದಲ್ಲಿ ಇಟ್ಟಿದ್ದ ಎರಡು ಪ್ರವಾಸಿ ಬಸ್ಸುಗಳು ಮತ್ತು ಎರಡು ಪಿಕಪ್ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಟ್ರಕ್ಕಿಂಗ್‌ನಲ್ಲಿ ಭಾಗವಹಿಸಿದ್ದವರು ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ. ಪ್ರವಾಸಿಗರನ್ನು ನಿಷೇಧಿತ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿಯೊಬ್ಬ ಎಂಬ ಮಾಹಿತಿ ಲಭ್ಯವಾಗಿದೆ.

ಅರಣ್ಯ ಇಲಾಖೆಯ ಪೂರ್ವಾನುಮತಿ ಇಲ್ಲದೆ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುುವುದು ಅರಣ್ಯ ಕಾಯ್ದೆಯ ಉಲ್ಲಂಘನೆ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನೈಸರ್ಗಿಕ ಸಂಪತ್ತು ಹಾಗೂ ವನ್ಯಜೀವಿ ಸಂರಕ್ಷಣೆಗೆ ಪ್ರಮುಖವಾದ ಈ ಪ್ರದೇಶದಲ್ಲಿ, ಅನಧಿಕೃತ ಪ್ರವೇಶದಿಂದ ಪರಿಸರದ ಮೇಲೆ ಹಾನಿಯಾಗುವ ಸಾಧ್ಯತೆ ಇದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!