September 6, 2026
ಅಪರಾಧ ಸುದ್ದಿವರದಿ

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

ಬೆಳ್ತಂಗಡಿ: ಮೂಡಿಗೆರೆ – ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡುಗಳಲ್ಲಿ ನಡೆದುಹೋಗುತ್ತಿದ್ದ ಈ ಟ್ರಕ್ಕಿಂಗ್ ಕಾರ್ಯಕ್ರಮವು ಅರಣ್ಯ ಕಾಯ್ದೆಗಳಿಗೆ ವಿಳಂಬವಾಗಿದ್ದು, ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆಗಳ ಸಂಯುಕ್ತ ಕಾರ್ಯಾಚರಣೆಯಿಂದ ಈ ದಾಳಿ ಯಶಸ್ವಿಯಾಗಿ ನಡೆಸಲಾಯಿತು. ಬಣಕಲ್ ಪಿಎಸ್‌ಐ ರೇಣುಕಾ ಹಾಗೂ ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರವಾಸಿಗರನ್ನು ಬಂಧಿಸಲಾಯಿತು.

ಬಂದೋಬಸ್ತಿನ ಭಾಗವಾಗಿ ಸ್ಥಳದಲ್ಲಿ ಇಟ್ಟಿದ್ದ ಎರಡು ಪ್ರವಾಸಿ ಬಸ್ಸುಗಳು ಮತ್ತು ಎರಡು ಪಿಕಪ್ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಟ್ರಕ್ಕಿಂಗ್‌ನಲ್ಲಿ ಭಾಗವಹಿಸಿದ್ದವರು ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ. ಪ್ರವಾಸಿಗರನ್ನು ನಿಷೇಧಿತ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿಯೊಬ್ಬ ಎಂಬ ಮಾಹಿತಿ ಲಭ್ಯವಾಗಿದೆ.

ಅರಣ್ಯ ಇಲಾಖೆಯ ಪೂರ್ವಾನುಮತಿ ಇಲ್ಲದೆ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುುವುದು ಅರಣ್ಯ ಕಾಯ್ದೆಯ ಉಲ್ಲಂಘನೆ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನೈಸರ್ಗಿಕ ಸಂಪತ್ತು ಹಾಗೂ ವನ್ಯಜೀವಿ ಸಂರಕ್ಷಣೆಗೆ ಪ್ರಮುಖವಾದ ಈ ಪ್ರದೇಶದಲ್ಲಿ, ಅನಧಿಕೃತ ಪ್ರವೇಶದಿಂದ ಪರಿಸರದ ಮೇಲೆ ಹಾನಿಯಾಗುವ ಸಾಧ್ಯತೆ ಇದೆ.

Related posts

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!