22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿವರದಿ

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

ಬೆಳ್ತಂಗಡಿ: ಮೂಡಿಗೆರೆ – ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡುಗಳಲ್ಲಿ ನಡೆದುಹೋಗುತ್ತಿದ್ದ ಈ ಟ್ರಕ್ಕಿಂಗ್ ಕಾರ್ಯಕ್ರಮವು ಅರಣ್ಯ ಕಾಯ್ದೆಗಳಿಗೆ ವಿಳಂಬವಾಗಿದ್ದು, ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆಗಳ ಸಂಯುಕ್ತ ಕಾರ್ಯಾಚರಣೆಯಿಂದ ಈ ದಾಳಿ ಯಶಸ್ವಿಯಾಗಿ ನಡೆಸಲಾಯಿತು. ಬಣಕಲ್ ಪಿಎಸ್‌ಐ ರೇಣುಕಾ ಹಾಗೂ ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರವಾಸಿಗರನ್ನು ಬಂಧಿಸಲಾಯಿತು.

ಬಂದೋಬಸ್ತಿನ ಭಾಗವಾಗಿ ಸ್ಥಳದಲ್ಲಿ ಇಟ್ಟಿದ್ದ ಎರಡು ಪ್ರವಾಸಿ ಬಸ್ಸುಗಳು ಮತ್ತು ಎರಡು ಪಿಕಪ್ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಟ್ರಕ್ಕಿಂಗ್‌ನಲ್ಲಿ ಭಾಗವಹಿಸಿದ್ದವರು ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ. ಪ್ರವಾಸಿಗರನ್ನು ನಿಷೇಧಿತ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿಯೊಬ್ಬ ಎಂಬ ಮಾಹಿತಿ ಲಭ್ಯವಾಗಿದೆ.

ಅರಣ್ಯ ಇಲಾಖೆಯ ಪೂರ್ವಾನುಮತಿ ಇಲ್ಲದೆ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುುವುದು ಅರಣ್ಯ ಕಾಯ್ದೆಯ ಉಲ್ಲಂಘನೆ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನೈಸರ್ಗಿಕ ಸಂಪತ್ತು ಹಾಗೂ ವನ್ಯಜೀವಿ ಸಂರಕ್ಷಣೆಗೆ ಪ್ರಮುಖವಾದ ಈ ಪ್ರದೇಶದಲ್ಲಿ, ಅನಧಿಕೃತ ಪ್ರವೇಶದಿಂದ ಪರಿಸರದ ಮೇಲೆ ಹಾನಿಯಾಗುವ ಸಾಧ್ಯತೆ ಇದೆ.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!