ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ನಿಗೂಢ ವಾಗಿ ಸಾವುಗೀಡಾದ ಪದ್ಮಲತಾ ಅವರ ಸಹೋದರಿ ಆ.11ರಂದು ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ದೂರು ನೀಡಲು ಆಗಮಿಸಿದ್ದಾರೆ.
ಪದ್ಮಲತಾ ಅವರ ಸಹೋದರಿ ಇಂದ್ರಾವತಿ ಅವರು ಸಿಪಿಎಂ ಪಕ್ಷದ ಮುಖಂಡ ಬಿ.ಎಂ.ಭಟ್ ಹಾಗೂ ಲಕ್ಷ್ಮಣ ಗೌಡ
ಇತರರೊಂದಿಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ
ಸುಮಾರು 39 ವರ್ಷಗಳ ಹಿಂದೆ ಅಂದರೆ 1986ರಲ್ಲಿ ಪದ್ಮಲತಾ ರವರು ನಿಗೂಢವಾಗಿ ಸಾವನ್ನಪ್ಪಿದ್ದರು. ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ನಡೆಸಿ ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿತ್ತು.
ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ದೂರುದಾರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆಗೆ ಎಸ್.ಐ.ಟಿ. ರಚಿಸಲಾಗಿದ್ದು, ತನಿಖೆ ನಡೆಸುತ್ತಿದೆ. ಈ ಮಧ್ಯೆ ಬೆಳ್ತಂಗಡಿಯಲ್ಲಿ ಎಸ್ಐಟಿ ಕಚೇರಿ ತೆರೆಯಲಾಗಿದ್ದು, ಅದಕ್ಕೆ ಠಾಣೆಯ ಸ್ಥಾನಮಾನ ನೀಡಲಾದ ಹಿನ್ನೆಲೆಯಲ್ಲಿ ಈ ದೂರನ್ನು ನೀಡಲಾಗುತ್ತಿದೆ.











