22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿ

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ನಿಗೂಢ ವಾಗಿ ಸಾವುಗೀಡಾದ ಪದ್ಮಲತಾ ಅವರ ಸಹೋದರಿ ಆ.11ರಂದು ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರು ನೀಡಲು ಆಗಮಿಸಿದ್ದಾರೆ.

ಪದ್ಮಲತಾ ಅವರ ಸಹೋದರಿ ಇಂದ್ರಾವತಿ ಅವರು ಸಿಪಿಎಂ ಪಕ್ಷದ ಮುಖಂಡ ಬಿ.ಎಂ.ಭಟ್ ಹಾಗೂ ಲಕ್ಷ್ಮಣ ಗೌಡ
ಇತರರೊಂದಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ
ಸುಮಾರು 39 ವರ್ಷಗಳ ಹಿಂದೆ ಅಂದರೆ 1986ರಲ್ಲಿ ಪದ್ಮಲತಾ ರವರು ನಿಗೂಢವಾಗಿ ಸಾವನ್ನಪ್ಪಿದ್ದರು. ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ನಡೆಸಿ ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿತ್ತು.

ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ದೂರುದಾರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆಗೆ ಎಸ್‌.ಐ.ಟಿ. ರಚಿಸಲಾಗಿದ್ದು, ತನಿಖೆ ನಡೆಸುತ್ತಿದೆ. ಈ ಮಧ್ಯೆ ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿ ತೆರೆಯಲಾಗಿದ್ದು, ಅದಕ್ಕೆ ಠಾಣೆಯ ಸ್ಥಾನಮಾನ ನೀಡಲಾದ ಹಿನ್ನೆಲೆಯಲ್ಲಿ ಈ ದೂರನ್ನು ನೀಡಲಾಗುತ್ತಿದೆ.

Related posts

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya
error: Content is protected !!