September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿ

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ನಿಗೂಢ ವಾಗಿ ಸಾವುಗೀಡಾದ ಪದ್ಮಲತಾ ಅವರ ಸಹೋದರಿ ಆ.11ರಂದು ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರು ನೀಡಲು ಆಗಮಿಸಿದ್ದಾರೆ.

ಪದ್ಮಲತಾ ಅವರ ಸಹೋದರಿ ಇಂದ್ರಾವತಿ ಅವರು ಸಿಪಿಎಂ ಪಕ್ಷದ ಮುಖಂಡ ಬಿ.ಎಂ.ಭಟ್ ಹಾಗೂ ಲಕ್ಷ್ಮಣ ಗೌಡ
ಇತರರೊಂದಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ
ಸುಮಾರು 39 ವರ್ಷಗಳ ಹಿಂದೆ ಅಂದರೆ 1986ರಲ್ಲಿ ಪದ್ಮಲತಾ ರವರು ನಿಗೂಢವಾಗಿ ಸಾವನ್ನಪ್ಪಿದ್ದರು. ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ನಡೆಸಿ ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿತ್ತು.

ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ದೂರುದಾರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆಗೆ ಎಸ್‌.ಐ.ಟಿ. ರಚಿಸಲಾಗಿದ್ದು, ತನಿಖೆ ನಡೆಸುತ್ತಿದೆ. ಈ ಮಧ್ಯೆ ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿ ತೆರೆಯಲಾಗಿದ್ದು, ಅದಕ್ಕೆ ಠಾಣೆಯ ಸ್ಥಾನಮಾನ ನೀಡಲಾದ ಹಿನ್ನೆಲೆಯಲ್ಲಿ ಈ ದೂರನ್ನು ನೀಡಲಾಗುತ್ತಿದೆ.

Related posts

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya
error: Content is protected !!