22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಕಲಿಯುಗದ ಕಾಮಧೇನು, ಭಕ್ತರ ಆರಧ್ಯ ದೇವರೆಂದೇ ಕರೆಯಲ್ಪಡುವ ಬೆಳ್ತಂಗಡಿ ತಾಲೂಕಿನಲ್ಲಿ ನೆಲೆನಿಂತ ಶ್ರೀಗುರುರಾಘವೇಂದ್ರ ಮಠದ ಬೆಳವಣಿಗೆ ತುಂಬಾ ಮಹತ್ವದ್ದು. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘಟನೆ ಶಿಸ್ತು ಮತ್ತು ಸ್ವಚ್ಛತೆಗೆ ಆಧ್ಯತೆ ನೀಡಿದ್ದಾರೆ ಎಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಲಿ ಬಲಿಪ ಹೇಳಿದರು.

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀಗುರುರಾಘವೇಂದ್ರ ಮಠದಲ್ಲಿ ಆ.10 ಆ.12 ರವರೆಗೆ ನಡೆಯುವ ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಆ.10 ರಂದು ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೆಳ್ತಂಗಡಿ ತುಳು ಶಿವಳ್ಳಿ ಸಭಾ ಒಕ್ಕೂಟ ಅಧ್ಯಕ್ಷ ರಾಜ ಪ್ರಸಾದ್ ಪೊಳ್ನಾಯ ಶ್ರೀ ಗಣಪತಿ ಹೋಮದೊಂದಿಗೆ ಚಾಲನೆ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳ್ತಂಗಡಿಯ ಸುಂದರ ಪರಿಸರದಲ್ಲಿ ಸೋಮಾವತಿ ನದಿ ತಟದಲ್ಲಿರುವ ರಾಯರ ಮಂದಿರ, ಸಣ್ಣ ಮಂತ್ರಾಲಯ ಎಂಬ ನಂಬಿಕೆಗೆ ಪಾತ್ರವಾಗಿದೆ. ವರ್ಷದಿಂದ ವರ್ಷಕ್ಕೆ ಇದರ ಪ್ರತೀತಿ ಹೆಚ್ಚುತ್ತಿದೆ. ಭಕ್ತರ ಸಂಖ್ಯೆಯು ಅಧಿಕವಾಗುತ್ತಿದೆ ಎಂದರು.

ಲಾಯಿಲ ಗ್ರಾ.ಪಂ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಾಧ್ಯಕ್ಷ ವಿ.ಆರ್.ನಾಯಕ್ ಮತ್ತು ಮಹಾಬಲ ಶೆಟ್ಟಿ ಹಾಗೂ ಟ್ರಸ್ಟಿ ಸೋಮೇಗೌಡ, ಸುಶೀಲಾ ಹೆಗ್ಡೆ ಉಪಸ್ಥಿತರಿದ್ದರು.

ಟ್ರಸ್ಟಿ, ನಿವೃತ್ತ ಪ್ರಾಂಶುಪಾಲ ಏ.ಕೃಷ್ಣಪ್ಪ ಪೂಜಾರಿ ಪ್ರಾಸ್ತಾವಿಸಿ ಸ್ವಾಗತಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು. ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

ಇಂದು( ಆ.11) ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದಲ್ಲಿ ನಿರ್ಮಾಣವಾದ ಶ್ರೀಗುರು ಪ್ರಸಾದ ಮಂಟಪ ಉದ್ಘಾಟನೆ ನೆರವೇರಲಿದೆ.

Related posts

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!