23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಆ.10 ರಂದು ನಡೆಯಿತು.

ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ ಉದಯ ನಗರ, ಸುದೆಮುಗೇರು ಪ್ರದೇಶದ ಮಕ್ಕಳು, ಹಿರಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟ ಉದ್ಘಾಟನೆ ಮಾಡಿದರು

ಪುರುಷರು, ಮಕ್ಕಳಿಗೆ ಲಿಂಬೆ ಚಮಚ ಓಟ, ಒಂಟಿ ಕಾಲಿನ ಓಟ, ಹಾಳೆ ಓಟ, ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಈ ಮೊದಲಾದ ಗ್ರಾಮೀಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಿಯಾಝ್ ಸಂಜಯನಗರ ಪಂದ್ಯಾಟವನ್ನು ನಡೆಸಿಕೊಟ್ಟರು. ವಯಸ್ಸಿನ ಮಿತಿಯನ್ನು ಲೆಕ್ಕಿಸದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಹಿರಿಯರು, ಕಿರಿಯರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷರಾದ ಇಸ್ಮಾಯಿಲ್, ಕೋಶಾಧಿಕಾರಿಯಾದ ರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ ಕ್ರೀಡಾಕೂಟವನ್ನು ನಡೆಸಿಕೊಟ್ಟರು.


ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ವಾತಂತ್ರ್ಯ ದಿನದಂದು ಸಂಜಯ್ ಗ್ಲೋಬಲ್ ಫೌಂಡೇಶನ್ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Related posts

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya
error: Content is protected !!