23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಆ.10 ರಂದು ನಡೆಯಿತು.

ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ ಉದಯ ನಗರ, ಸುದೆಮುಗೇರು ಪ್ರದೇಶದ ಮಕ್ಕಳು, ಹಿರಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟ ಉದ್ಘಾಟನೆ ಮಾಡಿದರು

ಪುರುಷರು, ಮಕ್ಕಳಿಗೆ ಲಿಂಬೆ ಚಮಚ ಓಟ, ಒಂಟಿ ಕಾಲಿನ ಓಟ, ಹಾಳೆ ಓಟ, ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಈ ಮೊದಲಾದ ಗ್ರಾಮೀಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಿಯಾಝ್ ಸಂಜಯನಗರ ಪಂದ್ಯಾಟವನ್ನು ನಡೆಸಿಕೊಟ್ಟರು. ವಯಸ್ಸಿನ ಮಿತಿಯನ್ನು ಲೆಕ್ಕಿಸದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಹಿರಿಯರು, ಕಿರಿಯರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷರಾದ ಇಸ್ಮಾಯಿಲ್, ಕೋಶಾಧಿಕಾರಿಯಾದ ರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ ಕ್ರೀಡಾಕೂಟವನ್ನು ನಡೆಸಿಕೊಟ್ಟರು.


ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ವಾತಂತ್ರ್ಯ ದಿನದಂದು ಸಂಜಯ್ ಗ್ಲೋಬಲ್ ಫೌಂಡೇಶನ್ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Related posts

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya
error: Content is protected !!