23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

ಬೆಳ್ತಂಗಡಿ: ನಾರಾವಿ ಗ್ರಾಮದ ಹಿರ್ತ್ತೊಟ್ಟು ಜಿನ್ನಪ್ಪ ಬಿ. ಪೂಜಾರಿ ಅವರ ಪತ್ನಿ, ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.

ಮಂಗಳೂರಿನ ಬೆಸೆಂಟ್‌ ಮಹಿಳಾ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ಸೆಕೆಟೇರಿಯಲ್‌ ಪ್ರಾಕ್ಟೀಸ್‌ ವಿಭಾಗದ ಸಹ ಪ್ರಾಧ್ಯಾಪಕಿಯಾಗಿರುವ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರಾಮು ಎನ್‌ ಮತ್ತು ಆರ್‌.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಹೇಮಲತಾ ಅವರು ಮಂಡಿಸಿದ ‘ಇಂಪ್ಯಾಕ್ಟ್‌ ಆಫ್‌ ಟ್ರೈನಿಂಗ್‌ ಆನ್‌ ದಿ ಸಾಫ್ಟ್‌ ಅಂಡ್‌ ಹಾರ್ಡ್‌ ಸ್ಕಿಲ್ಸ್‌ ಟುವರ್ಡ್ಸ್‌ ಎಫೀಶಿಯೆನ್ಸಿ ಆಫ್‌ ಎಂಪ್ಲಾಯಿಸ್‌ ಆಫ್‌ ಎಂಎಸ್‌ಎಂಇಎಸ್‌ ಇನ್‌ ದಕ್ಷಿಣ ಕನ್ನಡ ಡಿಸ್ಟ್ರಿಕ್‌’ (Impact of training on the Soft and Hard skills towards efficiency of employees of MSMEs in Dakshina Kannada District) ಎಂಬ ಮಹಾಪ್ರಬಂಧ ಡಾಕ್ಟರೇಟ್‌ ಪದವಿಗೆ ಆಯ್ಕೆಯಾಗಿದೆ.

ಹೇಮಲತಾ ಅವರು ಶಿರ್ವ ಮಂಚಕಲ್‌ ಗ್ರಾಮದ ಸೋಮಪ್ಪ ಮತ್ತು ಕಂಪಾಬೈ ದಂಪತಿಯ ಪುತ್ರಿ.

Related posts

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!