September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

ಬೆಳ್ತಂಗಡಿ: ನಾರಾವಿ ಗ್ರಾಮದ ಹಿರ್ತ್ತೊಟ್ಟು ಜಿನ್ನಪ್ಪ ಬಿ. ಪೂಜಾರಿ ಅವರ ಪತ್ನಿ, ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.

ಮಂಗಳೂರಿನ ಬೆಸೆಂಟ್‌ ಮಹಿಳಾ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ಸೆಕೆಟೇರಿಯಲ್‌ ಪ್ರಾಕ್ಟೀಸ್‌ ವಿಭಾಗದ ಸಹ ಪ್ರಾಧ್ಯಾಪಕಿಯಾಗಿರುವ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರಾಮು ಎನ್‌ ಮತ್ತು ಆರ್‌.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಹೇಮಲತಾ ಅವರು ಮಂಡಿಸಿದ ‘ಇಂಪ್ಯಾಕ್ಟ್‌ ಆಫ್‌ ಟ್ರೈನಿಂಗ್‌ ಆನ್‌ ದಿ ಸಾಫ್ಟ್‌ ಅಂಡ್‌ ಹಾರ್ಡ್‌ ಸ್ಕಿಲ್ಸ್‌ ಟುವರ್ಡ್ಸ್‌ ಎಫೀಶಿಯೆನ್ಸಿ ಆಫ್‌ ಎಂಪ್ಲಾಯಿಸ್‌ ಆಫ್‌ ಎಂಎಸ್‌ಎಂಇಎಸ್‌ ಇನ್‌ ದಕ್ಷಿಣ ಕನ್ನಡ ಡಿಸ್ಟ್ರಿಕ್‌’ (Impact of training on the Soft and Hard skills towards efficiency of employees of MSMEs in Dakshina Kannada District) ಎಂಬ ಮಹಾಪ್ರಬಂಧ ಡಾಕ್ಟರೇಟ್‌ ಪದವಿಗೆ ಆಯ್ಕೆಯಾಗಿದೆ.

ಹೇಮಲತಾ ಅವರು ಶಿರ್ವ ಮಂಚಕಲ್‌ ಗ್ರಾಮದ ಸೋಮಪ್ಪ ಮತ್ತು ಕಂಪಾಬೈ ದಂಪತಿಯ ಪುತ್ರಿ.

Related posts

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!