25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

ಬೆಳ್ತಂಗಡಿ: ನಾರಾವಿ ಗ್ರಾಮದ ಹಿರ್ತ್ತೊಟ್ಟು ಜಿನ್ನಪ್ಪ ಬಿ. ಪೂಜಾರಿ ಅವರ ಪತ್ನಿ, ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.

ಮಂಗಳೂರಿನ ಬೆಸೆಂಟ್‌ ಮಹಿಳಾ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ಸೆಕೆಟೇರಿಯಲ್‌ ಪ್ರಾಕ್ಟೀಸ್‌ ವಿಭಾಗದ ಸಹ ಪ್ರಾಧ್ಯಾಪಕಿಯಾಗಿರುವ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರಾಮು ಎನ್‌ ಮತ್ತು ಆರ್‌.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಹೇಮಲತಾ ಅವರು ಮಂಡಿಸಿದ ‘ಇಂಪ್ಯಾಕ್ಟ್‌ ಆಫ್‌ ಟ್ರೈನಿಂಗ್‌ ಆನ್‌ ದಿ ಸಾಫ್ಟ್‌ ಅಂಡ್‌ ಹಾರ್ಡ್‌ ಸ್ಕಿಲ್ಸ್‌ ಟುವರ್ಡ್ಸ್‌ ಎಫೀಶಿಯೆನ್ಸಿ ಆಫ್‌ ಎಂಪ್ಲಾಯಿಸ್‌ ಆಫ್‌ ಎಂಎಸ್‌ಎಂಇಎಸ್‌ ಇನ್‌ ದಕ್ಷಿಣ ಕನ್ನಡ ಡಿಸ್ಟ್ರಿಕ್‌’ (Impact of training on the Soft and Hard skills towards efficiency of employees of MSMEs in Dakshina Kannada District) ಎಂಬ ಮಹಾಪ್ರಬಂಧ ಡಾಕ್ಟರೇಟ್‌ ಪದವಿಗೆ ಆಯ್ಕೆಯಾಗಿದೆ.

ಹೇಮಲತಾ ಅವರು ಶಿರ್ವ ಮಂಚಕಲ್‌ ಗ್ರಾಮದ ಸೋಮಪ್ಪ ಮತ್ತು ಕಂಪಾಬೈ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!