25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ ದುರಸ್ತಿ ಮಾಡಲಾಯಿತು.

ಸಂಘದ ಅಧ್ಯಕ್ಷ ಸಿದ್ದೀಕ್ ಕೆಂಪಿ ಅವರ ನೇತೃತ್ವದಲ್ಲಿ ನಡೆದ ಈ ಶ್ರಮದಾನದಲ್ಲಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಗುಂಡಿ‌ ಹಾಗೂ‌ ಏರು‌ತಗ್ಗುಗಳನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಸರಾಗವಾಗಿ ಸಂಚರಿಸುವಂತೆ ಕ್ರಮ‌ವಹಿಸಲಾಯಿತು.

ಶ್ರಮದಾನದಲ್ಲಿ ಖಾಸಗಿ ಬಸ್ಸು ನೌಕರರ ಸಂಘದ ಪ್ರಮುಖರಾದ ಇಲ್ಯಾಸ್ ಕರಾಯ, ನಾರಾಯಣ, ಗಣೇಶ, ಜಯ, ಸಾದಿಕ್, ಕೆ‌ಎಸ್ ಅಬ್ದುಲ್ಲ, ಶಬೀರ್, ದಿನೇಶ್, ರಾಜೇಶ್, ಗಣೇಶ್ ಅಳಕೆ, ಬಾಬು, ಸತೀಶ್ ಕಾಮತ್, ಎಂ.ಕೆ ಮಠ, ದಿನೇಶ್ ಸಹಕರಿಸಿದರು. ತಂಡದ ಕಾರ್ಯವನ್ನು ಪ್ರಯಾಣಿಕರು ಕೊಂಡಾಡಿದರು.

Related posts

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!