22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ ದುರಸ್ತಿ ಮಾಡಲಾಯಿತು.

ಸಂಘದ ಅಧ್ಯಕ್ಷ ಸಿದ್ದೀಕ್ ಕೆಂಪಿ ಅವರ ನೇತೃತ್ವದಲ್ಲಿ ನಡೆದ ಈ ಶ್ರಮದಾನದಲ್ಲಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಗುಂಡಿ‌ ಹಾಗೂ‌ ಏರು‌ತಗ್ಗುಗಳನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಸರಾಗವಾಗಿ ಸಂಚರಿಸುವಂತೆ ಕ್ರಮ‌ವಹಿಸಲಾಯಿತು.

ಶ್ರಮದಾನದಲ್ಲಿ ಖಾಸಗಿ ಬಸ್ಸು ನೌಕರರ ಸಂಘದ ಪ್ರಮುಖರಾದ ಇಲ್ಯಾಸ್ ಕರಾಯ, ನಾರಾಯಣ, ಗಣೇಶ, ಜಯ, ಸಾದಿಕ್, ಕೆ‌ಎಸ್ ಅಬ್ದುಲ್ಲ, ಶಬೀರ್, ದಿನೇಶ್, ರಾಜೇಶ್, ಗಣೇಶ್ ಅಳಕೆ, ಬಾಬು, ಸತೀಶ್ ಕಾಮತ್, ಎಂ.ಕೆ ಮಠ, ದಿನೇಶ್ ಸಹಕರಿಸಿದರು. ತಂಡದ ಕಾರ್ಯವನ್ನು ಪ್ರಯಾಣಿಕರು ಕೊಂಡಾಡಿದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya
error: Content is protected !!