September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ ದುರಸ್ತಿ ಮಾಡಲಾಯಿತು.

ಸಂಘದ ಅಧ್ಯಕ್ಷ ಸಿದ್ದೀಕ್ ಕೆಂಪಿ ಅವರ ನೇತೃತ್ವದಲ್ಲಿ ನಡೆದ ಈ ಶ್ರಮದಾನದಲ್ಲಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಗುಂಡಿ‌ ಹಾಗೂ‌ ಏರು‌ತಗ್ಗುಗಳನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಸರಾಗವಾಗಿ ಸಂಚರಿಸುವಂತೆ ಕ್ರಮ‌ವಹಿಸಲಾಯಿತು.

ಶ್ರಮದಾನದಲ್ಲಿ ಖಾಸಗಿ ಬಸ್ಸು ನೌಕರರ ಸಂಘದ ಪ್ರಮುಖರಾದ ಇಲ್ಯಾಸ್ ಕರಾಯ, ನಾರಾಯಣ, ಗಣೇಶ, ಜಯ, ಸಾದಿಕ್, ಕೆ‌ಎಸ್ ಅಬ್ದುಲ್ಲ, ಶಬೀರ್, ದಿನೇಶ್, ರಾಜೇಶ್, ಗಣೇಶ್ ಅಳಕೆ, ಬಾಬು, ಸತೀಶ್ ಕಾಮತ್, ಎಂ.ಕೆ ಮಠ, ದಿನೇಶ್ ಸಹಕರಿಸಿದರು. ತಂಡದ ಕಾರ್ಯವನ್ನು ಪ್ರಯಾಣಿಕರು ಕೊಂಡಾಡಿದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya
error: Content is protected !!